ನವದೆಹಲಿ: ದೇಶದಲ್ಲಿ ಶುಕ್ರವಾರ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 111ನೇ ಜನ್ಮದಿನವನ್ನು ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಅವರಿಗೆ ಗೌರವ ನಮನಗಳನ್ನು ಸಲ್ಲಿಸಿದ್ದಾರೆ.
’ದೇಶದ ಹೆಮ್ಮೆಯ ಪುತ್ರ ಲಾಲ್ ಬಹುದ್ದೂರ್ ಶಾಸ್ತ್ರೀ ಅವರಿಗೆ ಜನ್ಮದಿನದ ಅಂಗವಾಗಿ ನನ್ನ ನಮನಗಳು, ಶಾಸ್ತ್ರೀ ಅವರು ಸರಳತೆ ಮತ್ತು ಸಮಗ್ರತೆಗಾಗಿ ನೆನೆಯಲ್ಪಡುತ್ತಾರೆ. ಕಠಿಣ ಸಂದರ್ಭಗಳ ಸಮಯದಲ್ಲಿ ಅವರು ನೀಡಿದ ನಾಯಕತ್ವ ನಮ್ಮ ದೇಶಕ್ಕೆ ದೊಡ್ಡ ಆಸ್ತಿ’ ಎಂದರು.
ಅವರು ನೀಡಿದ ಜೈ ಜವಾನ್, ಜೈ ಕಿಸಾನ್ ಘೋಷಣೆ ಸೈನಿಕರು ಮತ್ತು ರೈತರ ಕಲ್ಯಾಣಕ್ಕಾಗಿ ದುಡಿಯಲು ಸದಾ ನಮಗೆ ಪ್ರೇರಣೆ ನೀಡುತ್ತದೆ ಎಂದರು.
ಶಾಸ್ತ್ರೀ ಅವರು ಭಾರತದ ಎರಡನೇ ಪ್ರಧಾನಿಯಾಗಿದ್ದು, ಜೂನ್ 9, 1964ರಿಂದ ಜನವರಿ 11, 1966 ರವರೆಗೆ ಅವರು ಪ್ರಧಾನಿಯಾಗಿದ್ದರು.
ಭಾರತ ರತ್ನವನ್ನು ಮರಣೋತ್ತರವಾಗಿ ಪಡೆದ ಮೊದಲ ನಾಯಕ ಇವರಾಗಿದ್ದಾರೆ, ವಿಜಯ್ ಘಾಟ್ನ್ನು ಇವರ ಸ್ಮರಣಾರ್ಥ ನಿರ್ಮಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.