ನವದೆಹಲಿ: ರೈತರ ಕಲ್ಯಾಣಕ್ಕಾಗಿನ ತಮ್ಮ ಪ್ರತಿಜ್ಞೆಯನ್ನು ಈಡೇರಿಸುವ ತಮ್ಮ ಸರ್ಕಾರದ ಬದ್ಧತೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಒತ್ತಿ ಹೇಳಿದರು, ಕಬ್ಬು ಬೆಲೆಯಲ್ಲಿ ಐತಿಹಾಸಿಕ ಹೆಚ್ಚಳವು ಈ ಪ್ರಯತ್ನಗಳ ಭಾಗವಾಗಿದೆ ಎಂದು ಪ್ರತಿಪಾದಿಸಿದರು.
ಕಬ್ಬು ಬೆಲೆಯಲ್ಲಿ ಹೆಚ್ಚಳದಿಂದ ಕೋಟ್ಯಂತರ ಕಬ್ಬು ರೈತರಿಗೆ ಅನುಕೂಲವಾಗಲಿದೆ ಎಂದು ಅವರು ಇಂದು ಎಕ್ಸ್ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಬುಧವಾರ ಕೇಂದ್ರ ಸಚಿವ ಸಂಪುಟ ಕೈಗೊಂಡ ಹಲವಾರು ನಿರ್ಧಾರಗಳ ಬಗ್ಗೆ ಜನರಿಗೆ ತಿಳಿಸಿದ್ದಾರೆ.
ಕೇಂದ್ರ ಸಚಿವ ಸಂಪುಟದ ಮಹತ್ವಪೂರ್ಣ ನಿರ್ಣಯದಲ್ಲಿ ಪ್ರತಿ ಕ್ವಿಂಟಾಲ್ ಕಬ್ಬಿಗೆ 340 ರೂಪಾಯಿಗಳ ಎಫ್ಆರ್ಪಿ ನಿರ್ಧರಿಸಲಾಗಿದೆ ಪ್ರಸ್ತುತ ಋತು 2023-24ರ ಎಫ್ಆರ್ಪಿಗೆ ಹೋಲಿಸಿದರೆ ಸಕ್ಕರೆ ಋತು 2024- 25 ಕ್ಕಾಗಿ ಎಫ್ಆರ್ಪಿ ಸರಿಸುಮಾರು 8% ಹೆಚ್ಚಳವಾಗಿದೆ.ಬ5 ಕೋಟಿಗೂ ಅಧಿಕ ಕಪ್ಪು ಬೆಳಗಾರರಿಗೆ ಇದರಿಂದ ಪ್ರಯೋಜನ ಸಿಗಲಿದೆ
ನಿರ್ಧಾರದ ನಂತರ ಅಧಿಕೃತ ಹೇಳಿಕೆ ನೀಡಿರುವ ಸರ್ಕಾರ, “ಹೊಸ ಎಫ್ಆರ್ಪಿಯು ಕಬ್ಬು ಬೆಳೆಗಾರರ ಏಳಿಗೆಯನ್ನು ಖಚಿತಪಡಿಸುತ್ತದೆ. ಭಾರತವು ಈಗಾಗಲೇ ವಿಶ್ವದ ಕಬ್ಬಿನ ಅತ್ಯಧಿಕ ಬೆಲೆಯನ್ನು ಪಾವತಿಸುತ್ತಿದೆ ಎಂಬುದು ಗಮನಾರ್ಹವಾಗಿದೆ ಮತ್ತು ಅದರ ಹೊರತಾಗಿಯೂ ಸರ್ಕಾರವು ದೇಶೀಯ ಗ್ರಾಹಕರಿಗೆ ವಿಶ್ವದ ಅಗ್ಗದ ಸಕ್ಕರೆಯನ್ನು ಖಾತ್ರಿಪಡಿಸುತ್ತಿದೆ” ಎಂದಿದೆ.
देशभर के अपने किसान भाई-बहनों के कल्याण से जुड़े हर संकल्प को पूरा करने के लिए हमारी सरकार प्रतिबद्ध है। इसी कड़ी में गन्ना खरीद की कीमत में ऐतिहासिक बढ़ोतरी को मंजूरी दी गई है। इस कदम से हमारे करोड़ों गन्ना उत्पादक किसानों को लाभ होगा।https://t.co/Ap14Lrjw8Z https://t.co/nDEY8SAC3D
— Narendra Modi (@narendramodi) February 22, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.