ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೇರಳದ ತಿರುವನಂತಪುರಂನಲ್ಲಿರುವ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರಕ್ಕೆ (ವಿಎಸ್ಎಸ್ಸಿ) ಭೇಟಿ ನೀಡಿದರು ಮತ್ತು ಸುಮಾರು 1,800 ಕೋಟಿ ರೂಪಾಯಿ ಮೌಲ್ಯದ ಮೂರು ಪ್ರಮುಖ ಬಾಹ್ಯಾಕಾಶ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದರು.
ಈ ಯೋಜನೆಗಳು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ PSLV ಇಂಟಿಗ್ರೇಷನ್ ಫೆಸಿಲಿಟಿಯನ್ನು, ಮಹೇಂದ್ರಗಿರಿಯಲ್ಲಿರುವ ಇಸ್ರೋ ಪ್ರೊಪಲ್ಷನ್ ಕಾಂಪ್ಲೆಕ್ಸ್ನಲ್ಲಿ ಹೊಸ ‘ಸೆಮಿ-ಕ್ರಯೋಜೆನಿಕ್ಸ್ ಇಂಟಿಗ್ರೇಟೆಡ್ ಎಂಜಿನ್ ಆಂಡ್ ಸ್ಟೇಜ್ ಟೆಸ್ಟ್ ಫೆಸಿಲಿಟಿ ಮತ್ತು ತಿರುವನಂತಪುರಂನ ವಿಎಸ್ಎಸ್ಸಿಯಲ್ಲಿ ಟ್ರಿಸಾನಿಕ್ ವಿಂಡ್ ಟನಲ್ ಫೆಸಿಲಿಟಿಯನ್ನು ಒಳಗೊಂಡಿದೆ.
ಮೋದಿಯವರು ಗಗನಯಾನ ಮಿಷನ್ನ ಸಿದ್ಧತೆಗಳನ್ನು ಪರಿಶೀಲಿಸಿದರು ಮತ್ತು ಗಗನ್ಯಾನ್ ಮಿಷನ್ಗೆ ಆಯ್ಕೆಯಾದ 4 ಗಗನಯಾತ್ರಿಗಳ ಹೆಸರನ್ನು ಬಹಿರಂಗಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ, 2035 ರ ವೇಳೆಗೆ ಭಾರತವು ಬಾಹ್ಯಾಕಾಶದಲ್ಲಿ ತನ್ನ ಬಾಹ್ಯಾಕಾಶ ನಿಲ್ದಾಣವನ್ನು ಹೊಂದಲಿದ್ದು ಅದು ಬಾಹ್ಯಾಕಾಶದ ಅಜ್ಞಾತ ವಿಸ್ತಾರಗಳನ್ನು ಅಧ್ಯಯನ ಮಾಡಲು ನಮಗೆ ಸಹಾಯ ಮಾಡುತ್ತದೆ. ಅಮೃತ ಕಾಲದ ಈ ಅವಧಿಯಲ್ಲಿ ಭಾರತೀಯ ಗಗನಯಾತ್ರಿಗಳು ನಮ್ಮ ರಾಕೆಟ್ನಲ್ಲಿ ಚಂದ್ರನ ಮೇಲ್ಮೈಗೆ ಇಳಿಯುತ್ತಾರೆ ಎಂದು ಅವರು ಹೇಳಿದರು. ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಯಶಸ್ಸು ದೇಶದ ಯುವ ಪೀಳಿಗೆಯಲ್ಲಿ ವೈಜ್ಞಾನಿಕ ಮನೋಧರ್ಮದ ಬೀಜಗಳನ್ನು ಬಿತ್ತುತ್ತಿದೆ ಎಂದು ಮೋದಿ ಹೇಳಿದರು.
ಮೋದಿ, ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಕೇಂದ್ರ ಸಚಿವ ವಿ ಮುರಳೀಧರನ್ ಅವರೊಂದಿಗೆ ವಿಎಸ್ಎಸ್ಸಿಯಲ್ಲಿ ಪ್ರದರ್ಶಿಸಲಾದ ವಿವಿಧ ಇಸ್ರೋ ಯೋಜನೆಗಳ ಪ್ರದರ್ಶನ ವೀಕ್ಷಿಸಿದರು.
ನಂತರ ತಿರುವನಂತಪುರದಲ್ಲಿ ಬಿಜೆಪಿ ರಾಜ್ಯ ಘಟಕ ಆಯೋಜಿಸಿದ್ದ ‘ಪಾದಯಾತ್ರೆ’ಯ ಸಮಾರೋಪ ಸಮಾರಂಭದ ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮೋದಿ ಮಾತನಾಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.