ನವದೆಹಲಿ: ತನ್ನ ಸ್ವಾತಂತ್ರ್ಯದ ಶತಮಾನೋತ್ಸವವನ್ನು ಆಚರಿಸುವಾಗ ಭಾರತ ಪ್ರತಿಯೊಂದು ಕ್ಷೇತ್ರದಲ್ಲೂ ಅಗ್ರಸ್ಥಾನದಲ್ಲಿರಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದರು.
ಗುಜರಾತಿನ ಕಲೋಲ್ನಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ಸ್ವಾಮಿನಾರಾಯಣ ವಿಶ್ವಮಂಗಲ ಗುರುಕುಲದ ವೈದ್ಯಕೀಯ ಕಾಲೇಜು ಉದ್ಘಾಟನೆಯನ್ನು ಉದ್ದೇಶಿಸಿ ಮಾತನಾಡಿದ ಶಾ, ದೇಶದ ಸಮಗ್ರ ಅಭಿವೃದ್ಧಿಗೆ ಎನ್ಡಿಎ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಕಳೆದ 10 ವರ್ಷಗಳಲ್ಲಿ, ಸರ್ಕಾರವು ದೇಶದಲ್ಲಿ ವೈದ್ಯಕೀಯ ಶಿಕ್ಷಣ ಸೇರಿದಂತೆ ಉನ್ನತ ಶಿಕ್ಷಣದ ವ್ಯಾಪ್ತಿಯನ್ನು ವಿಸ್ತರಿಸಿದೆ ಮಾತ್ರವಲ್ಲದೆ ಹಲವಾರು ಶೈಕ್ಷಣಿಕ ಪಠ್ಯಕ್ರಮಗಳನ್ನು ಪರಿಷ್ಕರಿಸಿದೆ ಎಂದರು.
ಸ್ಟಾರ್ಟ್ಅಪ್ಗಳ ಮಹತ್ವವನ್ನು ಒತ್ತಿ ಹೇಳಿದ ಗೃಹ ಸಚಿವರು, ಯುವ ಉದ್ಯಮಿಗಳನ್ನು ಉತ್ತೇಜಿಸಲು ಸರ್ಕಾರವು ಅನುಕೂಲಕರ ವಾತಾವರಣವನ್ನು ಒದಗಿಸುತ್ತಿದೆ. ವಿದ್ಯಾರ್ಥಿಗಳಲ್ಲಿನ ಭಾಷಾ ಕೀಳರಿಮೆ ತೊಡೆದುಹಾಕಲು ಸರ್ಕಾರ ಹೊಸ ಶಿಕ್ಷಣ ನೀತಿಯನ್ನು ತಂದಿದೆ ಮತ್ತು ಸ್ಥಳೀಯ ಭಾಷೆಗಳಲ್ಲಿ ವೈದ್ಯಕೀಯ ಶಿಕ್ಷಣವನ್ನು ಉತ್ತೇಜಿಸುತ್ತಿದೆ ಎಂದು ಶಾ ಹೇಳಿದರು.
ಈ ದಿನದ ಭೇಟಿಯಲ್ಲಿ ಸಚಿವರು ತಮ್ಮ ಲೋಕಸಭಾ ಕ್ಷೇತ್ರ ಗಾಂಧಿನಗರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.