ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮಂಗಳವಾರ ಏಳು ರಾಜ್ಯಗಳ 17 ಸ್ಥಳಗಳಲ್ಲಿ ಶೋಧ ಆರಂಭಿಸಿದ್ದು, ಬೆಂಗಳೂರು ಜೈಲಿನಲ್ಲಿ ಕೈದಿಗಳನ್ನು ಭಯೋತ್ಪಾದನೆಗೆ ಸೇರಲು ಪ್ರೇರೇಪಿಸಿದ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದೆ. ಪ್ರಸ್ತುತ ಬೆಂಗಳೂರು ಮತ್ತು ತಮಿಳುನಾಡು ಸೇರಿದಂತೆ ಇತರ ರಾಜ್ಯಗಳಲ್ಲಿ ಶೋಧ ಕಾರ್ಯಗಳು ನಡೆಯುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಭಯೋತ್ಪಾದಕ ಸಂಚಿನಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ಸಂಬಂಧಿಸಿದ ಸ್ಥಳಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗುತ್ತಿದೆ.
ಈ ತನಿಖೆಯು ಬೆಂಗಳೂರು ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಜೈಲು ಮೂಲಭೂತೀಕರಣ ಮತ್ತು ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದೆ. ಈ ವರ್ಷದ ಜನವರಿ 12 ರಂದು ಎನ್ಐಎ ಎಂಟು ವ್ಯಕ್ತಿಗಳ ವಿರುದ್ಧ ಆರೋಪ ಹೊರಿಸಿತ್ತು.
2013ರಿಂದ ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೇರಳದ ಕಣ್ಣೂರು ಜಿಲ್ಲೆಯ ಟಿ ನಾಸೀರ್ ಎಂಬಾತ ಪ್ರಮುಖ ಆರೋಪಿಯಾಗಿದ್ದು, ಜುನೈದ್ ಅಹ್ಮದ್ ಮತ್ತು ಸಲ್ಮಾನ್ ಖಾನ್ ದೇಶದಿಂದ ಪಲಾಯನಗೈದಿರುವ ಶಂಕಿತ ಆರೋಪಿಗಳು. ಉಳಿದ ವ್ಯಕ್ತಿಗಳು ಸೈಯದ್ ಸುಹೇಲ್ ಖಾನ್ (ಅಲಿಯಾಸ್) ಸುಹೇಲ್ಮತ್ತು ಮೊಹಮ್ಮದ್ ಫೈಸಲ್ ರಬ್ಬಾನಿ (ಅಲಿಯಾಸ್ ಸಾದತ್) ಕೂಡ ಆರೋಪಿಗಳಾಗಿದ್ದಾರೆ. ಇವರು ಭಾರತೀಯ ದಂಡ ಸಂಹಿತೆ, ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ, ಸ್ಫೋಟಕ ವಸ್ತುಗಳ ಕಾಯ್ದೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ಆರೋಪಗಳನ್ನು ಎದುರಿಸುತ್ತಿದ್ದಾರೆ.
ಜುಲೈ 18, 2023 ರಂದು ಬೆಂಗಳೂರು ನಗರ ಪೊಲೀಸರು ಮನೆಯೊಂದರಲ್ಲಿ ಒಟ್ಟುಗೂಡಿದ್ದ ಏಳು ಆರೋಪಿಗಳಿಂದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು, ಹ್ಯಾಂಡ್ ಗ್ರೆನೇಡ್ಗಳು ಮತ್ತು ವಾಕಿ-ಟಾಕಿಗಳನ್ನು ವಶಪಡಿಸಿಕೊಂಡ ನಂತರ ಈ ಪ್ರಕರಣದ ತನಿಖೆ ಆರಂಬವಾಗಿದೆ. 2023 ರ ಅಕ್ಟೋಬರ್ನಲ್ಲಿ, ಎನ್ಐಎ ತನಿಖೆಯನ್ನು ವಹಿಸಿಕೊಂಡಿತು, ಸ್ಫೋಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಇತಿಹಾಸ ಹೊಂದಿರುವ ಟಿ.ನಾಸೀರ್, 2017 ರಲ್ಲಿ ಬೆಂಗಳೂರು ಜೈಲಿನಲ್ಲಿದ್ದ ಇತರ ಆರೋಪಿಗಳೊಂದಿಗೆ ಸಂಪರ್ಕಕ್ಕೆ ಬಂದಿದ್ದನ್ನು ಎಂದು ತನಿಖೆ ಬಹಿರಂಗಪಡಿಸಿತು.
ಆರೋಪಿಯನ್ನು ತನ್ನ ಬ್ಯಾರಕ್ಗೆ ವರ್ಗಾಯಿಸಲು ನಾಸೀರ್ ಯೋಜಿಸಿದ್ದ, ಅವನು ಜುನೈದ್ ಮತ್ತು ಸಲ್ಮಾನ್ರನ್ನು ಯಶಸ್ವಿಯಾಗಿ ಉಗ್ರವಾದಕ್ಕೆ ಸೇರಿಸಿಕೊಂಡ ಮತ್ತು ಇತರರನ್ನು ಮತ್ತಷ್ಟು ನೇಮಕ ಮಾಡಿಕೊಳ್ಳಲು ಜುನೈದ್ನೊಂದಿಗೆ ಸೇರಿ ಪಿತೂರಿ ನಡೆಸಿದ ಎಂದು ತನಿಖೆಯಿಂದ ತಿಳಿದು ಬಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.