ಶ್ರೀನಗರ: “ಇದು ಹೊಸ ಜಮ್ಮು ಮತ್ತು ಕಾಶ್ಮೀರ. ಇದಕ್ಕಾಗಿ ನಾವೆಲ್ಲರೂ ಹಲವು ದಶಕಗಳಿಂದ ಕಾಯುತ್ತಿದ್ದೆವು” ಎಂದು ಜಮ್ಮು-ಕಾಶ್ಮೀರ ಭೇಟಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 370ನೇ ವಿಧಿ ರದ್ಧತಿ ಬಳಿಕ ಇದು ಅವರ ಮೊದಲ ಕಾಶ್ಮೀರ ಭೇಟಿಯಾಗಿದೆ.
ಶ್ರೀನಗರದಲ್ಲಿ ಹಲವಾರು ಸಾವಿರ ಕೋಟಿಗಳ ಅಭಿವೃದ್ಧಿ ಯೋಜನೆಗಳನ್ನು ಅನಾವರಣಗೊಳಿಸಿದ ಬಳಿಕ ಮಾತನಾಡಿದ ಪ್ರಧಾನಿ, ಈಗ ಜಮ್ಮು-ಕಾಶ್ಮೀರ ಮುಕ್ತವಾಗಿ ಉಸಿರಾಡುತ್ತಿದೆ ಮತ್ತು ಅವರ ಸರ್ಕಾರವು ಆರ್ಟಿಕಲ್ 370 ಅನ್ನು ರದ್ದುಪಡಿಸಿದ ನಂತರ ತ್ವರಿತ ಗತಿಯಲ್ಲಿ ಅಭಿವೃದ್ಧಿ ಹೊಂದುತ್ತಿದೆ ಎಂದರು.
“ಇಂದು 370 ಕಲಂ ಇಲ್ಲ, ಆದ್ದರಿಂದ ಜಮ್ಮು ಮತ್ತು ಕಾಶ್ಮೀರದ ಯುವಕರ ಪ್ರತಿಭೆಯನ್ನು ಗೌರವಿಸಲಾಗುತ್ತದೆ ಮತ್ತು ಅವರು ಹೊಸ ಅವಕಾಶಗಳನ್ನು ಪಡೆಯುತ್ತಿದ್ದಾರೆ” ಎಂದು ಹೇಳಿದರು.
“ಇಂದು, ಜೆ & ಕೆ ಅಭಿವೃದ್ಧಿಯ ಹೊಸ ಎತ್ತರವನ್ನು ಮುಟ್ಟುತ್ತಿದೆ. ಮುಕ್ತವಾಗಿ ಉಸಿರಾಡುತ್ತಿದೆ. 370 ನೇ ವಿಧಿಯನ್ನು ತೆಗೆದುಹಾಕಿದ ನಂತರ ಈ ಸ್ವಾತಂತ್ರ್ಯ ಬಂದಿದೆ” ಎಂದು ಅವರು ಗುಡುಗಿದರು.
ಪ್ರಧಾನ ಮಂತ್ರಿಯವರು ತಮ್ಮ ಪ್ರತಿಸ್ಪರ್ಧಿಗಳ ವಿರುದ್ಧ ವಾಗ್ದಾಳಿ ನಡೆಸಿ, ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ರಾಜಕೀಯ ಲಾಭಕ್ಕಾಗಿ ಜನರನ್ನು ದಾರಿ ತಪ್ಪಿಸುತ್ತಿವೆ ಎಂದು ಆರೋಪಿಸಿದರು.
“ಈ ಹೊಸ ಜಮ್ಮು ಮತ್ತು ಕಾಶ್ಮೀರದ ದೃಷ್ಟಿಯಲ್ಲಿ ಭವಿಷ್ಯದ ಹೊಳಪು ಇದೆ. ಈ ಹೊಸ ಜಮ್ಮು ಮತ್ತು ಕಾಶ್ಮೀರದ ಉದ್ದೇಶಗಳಲ್ಲಿ ಸವಾಲುಗಳನ್ನು ಜಯಿಸಲು ಧೈರ್ಯವಿದೆ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರು ಈ ಕಾಶ್ಮೀರಕ್ಕಾಗಿ ತಮ್ಮ ಜೀವವನ್ನು ಸಮರ್ಪಿಸಿದರು” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.