ಶ್ರೀನಗರ: ಇಂದು ಜಮ್ಮು-ಕಾಶ್ಮೀರಕ್ಕೆ ತೆರಳಿದ ಮೋದಿಯವರಿಗೆ ಅದ್ಧೂರಿ ಸ್ವಾಗತ ದೊರೆತಿದೆ. ಭೇಟಿಯ ವೇಳೆ ಅವರು ಅಲ್ಲಿನ ಉದ್ಯಮಿಗಳು, ಕರಕುಶಲಕರ್ಮಿಗಳೊಂದಿಗೆ ಬೆರೆತಿದ್ದಾರೆ ಮತ್ತು ಅವರ ಕಷ್ಟಸುಖಗಳನ್ನು ಆಲಿಸಿದ್ದಾರೆ. ಅಲ್ಲದೇ ಅಭಿಮಾನಿಗಳೊಂದಿಗೆ ಸೆಲ್ಪಿ ಕ್ಲಿಕ್ಕಿಸಿದ್ದಾರೆ.
ಶ್ರೀನಗರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದ ಸ್ಥಳೀಯ ಉತ್ಪನ್ನಗಳನ್ನು ಪ್ರದರ್ಶಿಸುವ ಪ್ರದರ್ಶನ ಸ್ಥಳಕ್ಕೆ ತೆರಳಿದರು ಸ್ಥಳೀಯ ಉದ್ಯಮಿಗಳು ಮತ್ತು ಕುಶಲಕರ್ಮಿಗಳನ್ನು ಭೇಟಿ ಮಾಡಿದರು. ಅಲ್ಲಿ ಅವರು ಕರಕುಲಶಲ ವಸ್ತುಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.
ಅಲದೇ ಸಮಾವೇಶದಲ್ಲಿ ಅಭಿಮಾನಿಯೊಂದಿಗೆ ತೆಗೆದುಕೊಂಡ ಸೆಲ್ಫಿಯನ್ನು ಎಕ್ಸ್ ಪೋಸ್ಟ್ನಲ್ಲಿ ಹಂಚಿಕೊಂಡಿದ್ದಾರೆ. ವಿಕ್ಷಿತ್ ಭಾರತ್ ಕಾರ್ಯಕ್ರಮದ ಫಲಾನುಭವಿ ನಾಜಿಮ್ ಅವರು ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರೊಂದಿಗೆ ಸಂವಾದ ನಡೆಸಿದರು ಮತ್ತು ಸೆಲ್ಫಿಗಾಗಿ ಮನವಿ ಮಾಡಿದರು. ಪ್ರಧಾನಮಂತ್ರಿ ಸೆಲ್ಫಿ ನೀಡಿದರು.
X ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಮೋದಿ, “ನನ್ನ ಸ್ನೇಹಿತ ನಜೀಮ್ ಅವರೊಂದಿಗೆ ಸ್ಮರಣೀಯ ಸೆಲ್ಫಿ. ಅವರು ಮಾಡುತ್ತಿರುವ ಒಳ್ಳೆಯ ಕೆಲಸದಿಂದ ನಾನು ಪ್ರಭಾವಿತನಾಗಿದ್ದೇನೆ. ಸಾರ್ವಜನಿಕ ಸಭೆಯಲ್ಲಿ ಅವರು ಸೆಲ್ಫಿಗೆ ವಿನಂತಿಸಿದರು ಮತ್ತು ಅವರನ್ನು ಭೇಟಿ ಮಾಡಲು ಸಂತೋಷಪಡುತ್ತೇನೆ. ಅವರ ಭವಿಷ್ಯಕ್ಕಾಗಿ, ಪ್ರಯತ್ನಗಳಿಗಾಗಿ ನನ್ನ ಶುಭಾಶಯಗಳು” ಎಂದಿದ್ದಾರೆ.
370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಕಾಶ್ಮೀರಕ್ಕೆ ಮೊದಲ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಕಣಿವೆಯ ಜನರ ಹೃದಯವನ್ನು ಗೆಲ್ಲಲು ತಮ್ಮ ಸರ್ಕಾರವು ಶ್ರಮಿಸುವುದನ್ನು ಮುಂದುವರಿಸುತ್ತದೆ ಎಂದು ಹೇಳಿದರು.
A memorable selfie with my friend Nazim. I was impressed by the good work he’s doing. At the public meeting he requested a selfie and was happy to meet him. My best wishes for his future endeavours. pic.twitter.com/zmAYF57Gbl
— Narendra Modi (@narendramodi) March 7, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.