ನವದೆಹಲಿ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಅತ್ಯಂತ ಮಹತ್ವದ ಕಾಯ್ದೆಯಾದ ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನಕ್ಕೆ ಸರ್ಕಾರ ಇಂದು ಅಧಿಸೂಚನೆ ಹೊರಡಿಸಿದೆ.
ನೆರೆಯ ಪಾಕಿಸ್ಥಾನ, ಅಫ್ಘಾನಿಸ್ಥಾನದಲ್ಲಿ ಧಾರ್ಮಿಕ ಕಿರುಕುಳಕ್ಕೆ ಒಳಪಟ್ಟು ಭಾರತಕ್ಕೆ 2014ರ ಮೊದಲು ಪಲಾಯನ ಮಾಡಿರುವ ಹಿಂದೂ, ಕ್ರಿಶ್ವಿಯನ್, ಜೈನ, ಬೌದ್ಧ ಮುಂತಾದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವವನ್ನು ನೀಡುವ ಕಾಯ್ದೆ ಇದಾಗಿದೆ.
ಡಿಸೆಂಬರ್ 2019 ರಲ್ಲಿ ಸಂಸತ್ತು ಈ ಮಸೂದೆಯನ್ನು ಅನುಮೋದಿಸಿದ ಬಳಿಕ ದೇಶವ್ಯಾಪಿ ಭಾರೀ ಪ್ರತಿಭಟನೆಗಳು ನಡೆದವು. ಕೆಲವರು ಇದನ್ನು ಮುಸ್ಲಿಂ ವಿರೋಧಿ ಕಾಯ್ದೆ ಎಂದು ಬಿಂಬಿಸಿದರು. ಇದುವೇ ಪ್ರತಿಭಟನೆಗೆ ಪ್ರಚೋದನೆ ನೀಡಿತ್ತು. ಹಿಂಸಾಚಾರದಲ್ಲಿ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು. ವಿರೋಧ ಪಕ್ಷದ ರಾಜಕಾರಣಿಗಳು ಮತ್ತು ಬಿಜೆಪಿಯೇತರ ರಾಜ್ಯಗಳ ತೀವ್ರ ಪ್ರತಿರೋಧದ ನಡುವೆಯೇ ಕಾಯ್ದೆ ರಾಜ್ಯಸಭೆ ಮತ್ತು ಲೋಕಸಭೆಯ ಅನುಮೋದನೆ ಪಡೆದಿತ್ತು.
2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯು ನೀಡಿದ್ದ ಪ್ರಮುಖ ಭರವಸೆಗಳಲ್ಲಿ ಸಿಎಎ ಕೂಡ ಒಂದು. 370ನೇ ವಿಧಿ ನಿರ್ಮೂಲನೆ, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಭರವಸೆಯನ್ನು ಅದು ಈಗಾಗಲೇ ನೆರವೇರಿಸಿದೆ. ಇದೀಗ 2024 ರ ಲೋಕಸಭಾ ಚುನಾವಣೆಗೆ ಕೆಲವೇ ವಾರಗಳ ಮೊದಲು ಸಿಎಎ ಅನುಷ್ಠಾನಕ್ಕೂ ಅಧಿಸೂಚನೆ ಹೊರಡಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.