ನವದೆಹಲಿ: ಬಿಜೆಪಿಯ ನಯಾಬ್ ಸಿಂಗ್ ಸೈನಿ ಇಂದು ಚಂಡೀಗಢದಲ್ಲಿ ನಡೆದ ಸರಳ ಸಮಾರಂಭದಲ್ಲಿ ಹರಿಯಾಣದ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಇಂದು ಬೆಳಿಗ್ಗೆ ಮನೋಹರ್ ಲಾಲ್ ಖಟ್ಟರ್ ಅವರ ರಾಜೀನಾಮೆಯಿಂದ ಉಲ್ಭಣಿಸಿದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಸೈನಿ ಸಿಎಂ ಆಗಿ ಹೊರಹೊಮ್ಮಿದ್ದಾರೆ.
ಹೊಸ ಸರ್ಕಾರವನ್ನು ಆರು ಸ್ವತಂತ್ರ ಶಾಸಕರು ಬೆಂಬಲಿಸುವ ಸಾಧ್ಯತೆಯಿದೆ ಮತ್ತು ಸಂಭಾವ್ಯವಾಗಿ JJP ಯ ಐವರು ಶಾಸಕರು ಬೆಂಬಲಿಸಲು ಸಿದ್ಧರಾಗಿದ್ದಾರೆ ಎನ್ನಲಾಗಿದೆ ಆದರೆ ಅವರಿಗೆ ಮಂತ್ರಿ ಸ್ಥಾನವನ್ನು ನೀಡುವ ನಿರೀಕ್ಷೆಯಿಲ್ಲ. 90 ಸದಸ್ಯ ಬಲದ ಸದನದಲ್ಲಿ ಬಿಜೆಪಿ ಈಗಾಗಲೇ 41 ಶಾಸಕರನ್ನು ಹೊಂದಿದ್ದು, ಇದರಲ್ಲಿ ಬಹುಮತಕ್ಕೆ 46 ಸ್ಥಾನ ಬೇಕು.
ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ವಿಫಲವಾದ ಹಿನ್ನೆಲೆಯಲ್ಲಿ ಆಡಳಿತಾರೂಢ ಬಿಜೆಪಿ-ಜೆಜೆಪಿ ಮೈತ್ರಿಕೂಟದ ವಿಭಜನೆಯ ನಂತರ ಖಟ್ಟರ್ ಮತ್ತು ಅವರ ಮಂತ್ರಿಗಳ ರಾಜೀನಾಮೆ ನಡೆಯಿತು. ಪರಿಸ್ಥಿತಿಯನ್ನು ಬಿಜೆಪಿ ಸರಿಯಾಗಿ ನಿಭಾಯಿಸಿ ಸರ್ಕಾರವನ್ನು ಮತ್ತೊಮ್ಮ ರಚಿಸಿದೆ.
ಸೈನಿ ಪ್ರಭಾವಿ ಇತರೆ ಹಿಂದುಳಿದ ವರ್ಗಗಳ ನಾಯಕರಾಗಿದ್ದು, ಚುನಾವಣೆಯ ಮೊದಲು ಪ್ರತಿ ರಾಜ್ಯದಲ್ಲಿ ಜಾತಿ ಮತ್ತು OBC ಸಮೀಕರಣಗಳ ಮೇಲೆ ಬಿಜೆಪಿಯ ಗಮನವನ್ನು ಈ ಆಯ್ಕೆ ಪ್ರತಿನಿಧಿಸುತ್ತದೆ. ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಗಢದಲ್ಲಿ ಬಿಜೆಪಿ ಇದೇ ರೀತಿಯ ಕ್ರಮಗಳನ್ನು ಕೈಗೊಂಡು ಯಶಸ್ವಿಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.