ನವದೆಹಲಿ: ಪ್ರತಿ ವರ್ಷ ಸೆಪ್ಟೆಂಬರ್ 17 ರಂದು ‘ಹೈದರಾಬಾದ್ ವಿಮೋಚನಾ ದಿನ’ ಆಚರಿಸುವುದಾಗಿ ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಘೋಷಿಸಿದೆ. ಭಾರತ ಸರ್ಕಾರವು ಈ ದಿನವನ್ನು ಆಚರಿಸಲು ನಿರ್ಧರಿಸಿದೆ ಮತ್ತು ದಶಕಗಳ ಹಿಂದೆ ಹೈದರಾಬಾದ್ ಅನ್ನು ವಿಮೋಚನೆಗೊಳಿಸಿದ ಮತ್ತು ಯುವಕರ ಮನಸ್ಸಿನಲ್ಲಿ ದೇಶಭಕ್ತಿಯ ಜ್ವಾಲೆಯನ್ನು ತುಂಬಿದ ಹುತಾತ್ಮರನ್ನು ಸ್ಮರಿಸಲು ನಿರ್ಧರಿಸಲಾಗಿದೆ ಎಂದು ಸಚಿವಾಯ ಹೇಳಿದೆ.
ಗೃಹ ಸಚಿವಾಲಯ ಬಿಡುಗಡೆ ಮಾಡಿದ ಅಧಿಸೂಚನೆಯ ಪ್ರಕಾರ, ಆಗಸ್ಟ್ 15, 1947 ರಂದು ಭಾರತಕ್ಕೆ ಸ್ವಾತಂತ್ರ್ಯ ಬಂದ ನಂತರವೂ 13 ತಿಂಗಳವರೆಗೆ ಹೈದರಾಬಾದ್ ನಿಜಾಮರ ಆಳ್ವಿಕೆಯಲ್ಲಿದ್ದ ಪ್ರಾಂತ್ಯ ಸ್ವಾತಂತ್ರ್ಯವನ್ನು ಪಡೆಯಲಿಲ್ಲ. ಸೆಪ್ಟೆಂಬರ್ 17, 1948 ರಂದು ಆಪರೇಷನ್ ಪೋಲೋ’ ಮೂಲಕ ಹೈದರಾಬಾದ್ ಪ್ರದೇಶವನ್ನು ನಿಜಾಮರ ಆಳ್ವಿಕೆಯಿಂದ ಬಿಡುಗಡೆ ಮಾಡಲಾಯಿತು.
ಸೆಪ್ಟೆಂಬರ್ 17, 1948 ರಂದು, ಅಂದಿನ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ನೇತೃತ್ವದ ಮಿಲಿಟರಿ ಕಾರ್ಯಾಚರಣೆಯ ಮೂಲಕ ಹೈದರಾಬಾದ್ ರಾಜ್ಯವು, ಆಗಿನ ನಿಜಾಮರ ಆಳ್ವಿಕೆಯಿಂದ ಮುಕ್ತಿ ಪಡೆದು ಭಾರತದ ಒಕ್ಕೂಟಕ್ಕೆ ವಿಲೀನಗೊಂಡಿತು.
ಸೆಪ್ಟಂಬರ್ 17ನ್ನು ಹೈದರಾಬಾದ್ ವಿಮೋಚನಾ ದಿನವನ್ನಾಗಿ ಆಚರಿಸಬೇಕು ಎಂದು ಈ ಪ್ರದೇಶದ ಜನರಿಂದ ಬೇಡಿಕೆಗಳು ಬಂದಿವೆ ಎಂದು ಗೃಹ ಸಚಿವಾಲಯ ತಿಳಿಸಿದೆ. “ಈಗ ಹೈದರಾಬಾದ್ ಅನ್ನು ವಿಮೋಚನೆಗೊಳಿಸಿದ ಹುತಾತ್ಮರನ್ನು ಸ್ಮರಿಸಲು ಮತ್ತು ಯುವಕರ ಮನಸ್ಸಿನಲ್ಲಿ ದೇಶಭಕ್ತಿಯ ಜ್ವಾಲೆಯನ್ನು ತುಂಬಲು, ಭಾರತ ಸರ್ಕಾರವು ಪ್ರತಿ ವರ್ಷ ಸೆಪ್ಟೆಂಬರ್ 17 ನೇ ದಿನವನ್ನು ‘ಹೈದರಾಬಾದ್ ವಿಮೋಚನಾ ದಿನ’ ಎಂದು ಆಚರಿಸಲು ನಿರ್ಧರಿಸಿದೆ” ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.