ನವದೆಹಲಿ: ಪಾಕಿಸ್ತಾನದಿಂದ ಬಂದಿರುವ ಹಿಂದೂ ನಿರಾಶ್ರಿತರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ದೆಹಲಿಯ ನಿವಾಸದ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ನಿರಾಶ್ರಿತರಾಗಿ ಭಾರತಕ್ಕೆ ಬಂದಿರುವ ಹಿಂದೂಗಳ ವಿರುದ್ಧ ಅವರು ನೀಡಿರುವ ಹೇಳಿಕೆಗಳ ವಿರುದ್ಧ ಈ ಪ್ರತಿಭಟನೆ ನಡೆಸಲಾಗುತ್ತಿದೆ.
ಸಿಎಎ ಜಾರಿಗೊಳಿಸುವ ಸರ್ಕಾರದ ನಿರ್ಧಾರವನ್ನು ಅತ್ಯಂತ ಅಪಾಯಕಾರಿ ಎಂದು ಬಣ್ಣಿಸಿರುವ ಕೇಜ್ರಿವಾಲ್, ಕುಟುಂಬ ಮತ್ತು ದೇಶದ ಅಭಿವೃದ್ಧಿಗೆ ಖರ್ಚು ಮಾಡಬೇಕಾದ ಸರ್ಕಾರದ ಹಣವನ್ನು ಈಗ ಪಾಕಿಸ್ತಾನಿಗಳಿಗೆ ಭಾರತದಲ್ಲಿ ನೆಲೆಸಲು ಅವಕಾಶ ನೀಡಲು ಖರ್ಚು ಮಾಡಬೇಕಾಗಿದೆ ಎಂದಿದ್ದರು.
“10 ವರ್ಷಗಳ ಕಾಲ ದೇಶವನ್ನು ಆಳಿದ ಬಳಿಕ ಮತ್ತು ಚುನಾವಣೆಯ ಮೊದಲು, ಅವರು ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಮಾತನಾಡುತ್ತಿದ್ದಾರೆ. ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರನ್ನು ನಮ್ಮ ದೇಶಕ್ಕೆ ಕರೆತಂದು ಇಲ್ಲಿಯೇ ಉದ್ಯೋಗ ಮಾಡಿ ನೆಲೆಸುತ್ತಾರೆ. ದೇಶದ ಯುವಕರಿಗೆ ಬಿಜೆಪಿ ಸರ್ಕಾರ ಉದ್ಯೋಗ ನೀಡುತ್ತಿಲ್ಲ. ಆದರೆ ಬಿಜೆಪಿ ಪಾಕಿಸ್ತಾನದಿಂದ ಜನರನ್ನು ಕರೆತಂದು ಅವರಿಗೆ ಇಲ್ಲಿ ಮನೆಗಳನ್ನು ನೀಡಲು ಬಯಸುತ್ತದೆ” ಎಂದು ಕೇಜ್ರಿವಾಲ್ ಹೇಳಿದ್ದರು.
ಕೇಜ್ರಿವಾಲ್ ಅವರ ನಿವಾಸದ ಹೊರಗೆ ದೆಹಲಿ ಪೊಲೀಸರನ್ನು ನಿಯೋಜಿಸಲಾಗಿದೆ.
ಮುಖ್ಯಮಂತ್ರಿ ನಿವಾಸದ ಹೊರಗೆ ಬೀಡುಬಿಟ್ಟಿದ್ದ ದೆಹಲಿ ಪೊಲೀಸ್ ಸಿಬ್ಬಂದಿ ಪ್ರತಿಭಟನಾಕಾರರನ್ನು ಮುಂದೆ ಸಾಗದಂತೆ ತಡೆದಿದ್ದಾರೆ. ಪ್ರದರ್ಶನಕಾರರಲ್ಲಿ ಗಣನೀಯ ಸಂಖ್ಯೆಯಲ್ಲಿ ಚಿಕ್ಕ ಮಕ್ಕಳು ಮತ್ತು ಅವರ ತಾಯಂದಿರು ಕೂಡ ಇದ್ದರು.
#WATCH | Hindu refugees from Pakistan stage protest outside Delhi CM Arvind Kejriwal's residence over his remarks on CAA. pic.twitter.com/TGCKsGzqVb
— ANI (@ANI) March 14, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.