ನವದೆಹಲಿ: ಯುಪಿ ಬೋರ್ಡ್ ಆಫ್ ಮದರಸಾ ಎಜುಕೇಶನ್ ಆಕ್ಟ್, 2004 ಅನ್ನು ಅಲಹಾಬಾದ್ ಹೈಕೋರ್ಟ್ ಶುಕ್ರವಾರ “ಅಸಂವಿಧಾನಿಕ” ಎಂದು ಘೋಷಿಸಿದೆ ಮತ್ತು ಇದು ಜಾತ್ಯತೀತತೆಯ ತತ್ವವನ್ನು ಉಲ್ಲಂಘಿಸುತ್ತದೆ ಎಂದು ಹೇಳಿದೆ.
ಈ ಕಾಯ್ದೆಯು ಜಾತ್ಯತೀತ ತತ್ವವನ್ನು ಉಲ್ಲಂಘಿಸಿದೆ ಎಂದು ನ್ಯಾಯಾಲಯವು ಹೇಳಿದೆ ಮತ್ತು ಕಾಯ್ದೆಯಡಿ ಸಂತ್ರಸ್ತರಾದ ವಿದ್ಯಾರ್ಥಿಗಳನ್ನು ನಿಯಮಿತ ಶಿಕ್ಷಣ ವ್ಯವಸ್ಥೆಗೆ ಸಂಯೋಜಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನವನ್ನು ನೀಡಿದೆ.
ಅಂಶುಮಾನ್ ಸಿಂಗ್ ರಾಥೋಡ್ ಎಂಬ ವ್ಯಕ್ತಿಯ ಕಾಯ್ದೆಯ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಬಳಿಕ ಅಲಹಬಾದ್ ಹೈಕೋರ್ಟ್ ಲಕ್ನೋ ವಿಭಾಗದ ನ್ಯಾಯಮೂರ್ತಿಗಳಾದ ವಿವೇಕ್ ಚೌಧರಿ ಮತ್ತು ಸುಭಾಷ್ ವಿದ್ಯಾರ್ಥಿ ಈ ತೀರ್ಪು ನೀಡಿದ್ದಾರೆ.
ರಾಥೋಡ್ ಅವರ ಅರ್ಜಿಯು ಯುಪಿ ಮದರಸ ಮಂಡಳಿಯ ಕಾನೂನು ಸಿಂಧುತ್ವವನ್ನು ವಿರೋಧಿಸಿದೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮದರಸಾಗಳ ಆಡಳಿತವನ್ನು ಟೀಕಿಸಿದೆ.
ಉತ್ತರಪ್ರದೇಶ ಸರ್ಕಾರವು ಅಕ್ರಮ ಮದರಸಾಗಳನ್ನು ಪತ್ತೆಹಚ್ಚಿ ಕೈಗೊಳ್ಳಲು ಮುಂದಾಗಿರುವ ಸಂದರ್ಭದಲ್ಲೇ ಹೈಕೋರ್ಟ್ ಈ ಮಹತ್ವದ ಆದೇಶವನ್ನು ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.