ನವದೆಹಲಿ: ಭಾರತವು ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರ ಪುಣ್ಯತಿಥಿಯನ್ನು ಇಂದು ಆಚರಿಸುತ್ತಿದೆ. ಭಗತ್ ಸಿಂಗ್, ಶಿವರಾಮ್ ರಾಜಗುರು ಮತ್ತು ಸುಖದೇವ್ ಥಾಪರ್ ಅವರು ದೇಶಕ್ಕಾಗಿ ತಮ್ಮನ್ನೇ ಬಲಿದಾನಗೈದ ಮಹಾನ್ ದಿನವಿಂದು. ಈ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ಕಲಿಗಳಿಗೆ ಶ್ರದ್ಧಾಂಜಲಿಗಳ ಮಹಾಪೂರವೇ ಹರಿದುಬರುತ್ತಿದೆ.
“ಭಾರತ ಮಾತೆಯ ನಿಜವಾದ ಪುತ್ರರಾದ ವೀರ ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರ ಹುತಾತ್ಮತೆಯನ್ನು ಇಂದು ರಾಷ್ಟ್ರವು ಗೌರವದಿಂದ ಸ್ಮರಿಸುತ್ತಿದೆ. ಹುತಾತ್ಮರ ದಿನದಂದು, ದೇಶಾದ್ಯಂತ ಅವರ ಕುಟುಂಬ ಸದಸ್ಯರಿಂದ ಅವರಿಗೆ ವಂದನೆಗಳು ಮತ್ತು ಗೌರವಗಳು. ಜೈ ಹಿಂದ್!” ಎಂದು ಪ್ರಧಾನಿ ನರೇಂದ್ರ ಎಕ್ಸ್ ಪೋಸ್ಟ್ ಮಾಡಿ ವಿಡಿಯೋ ಹಂಚಿಕೊಂಡಿದ್ದಾರೆ.
ಲಾಹೋರ್ ಪಿತೂರಿ ಪ್ರಕರಣದಲ್ಲಿ ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಅವರನ್ನು ಮಾರ್ಚ್ 23, 1931 ರಂದು ಗಲ್ಲಿಗೇರಿಸಲಾಯಿತು. ತಾಯ್ನಾಡಿಗಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅವರ ಮನೋಭಾವ ದೇಶವಾಸಿಗಳಿಗೆ ಸದಾ ಸ್ಪೂರ್ತಿ ನೀಡುತ್ತಲೇ ಇದೆ.
ಈ ಮೂವರ ದೇಶಭಕ್ತಿಯು ಪರಕೀಯರ ಆಳ್ವಿಕೆಯಲ್ಲಿ ಸ್ವಾತಂತ್ರ್ಯದ ಚೈತನ್ಯವನ್ನು ಹುಟ್ಟುಹಾಕಿತು ಮತ್ತು ಇಂದಿಗೂ ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿ ನೀಡುತ್ತಲೇ ಇದೆ ಎಂದು ತಪ್ಪಾಗಲಾರದು.
राष्ट्र आज मां भारती के सच्चे सपूत वीर भगत सिंह, सुखदेव और राजगुरु की शहादत को श्रद्धापूर्वक स्मरण कर रहा है। शहीद दिवस पर देशभर के अपने परिवारजनों की ओर से उन्हें नमन और वंदन। जय हिंद! pic.twitter.com/muz6dWZWel
— Narendra Modi (@narendramodi) March 23, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.