ಬೆಂಗಳೂರು: ಕರ್ನಾಟಕದ ದಾವಣಗೆರೆ ಸಂಸದೀಯ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿರುವ ಗಾಯತ್ರಿ ಸಿದ್ದೇಶ್ವರ ಅವರ ಬಗ್ಗೆ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಇತ್ತೀಚೆಗೆ ನೀಡಿದ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಶಿವಶಂಕರಪ್ಪ, ಗಾಯತ್ರಿ ಅವರಿಗೆ ಸಾರ್ವಜನಿಕ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪರಿಹರಿಸುವ ಸಾಮರ್ಥ್ಯದ ಕೊರತೆಯಿದೆ ಎಂದು ಆರೋಪಿಸಿ ಅವರ ವಿದ್ಯಾರ್ಹತೆಯನ್ನು ಅವಹೇಳನ ಮಾಡಿದ್ದಾರೆ.
“ನಿಮಗೆಲ್ಲ ಗೊತ್ತಿರುವಂತೆ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಮೋದಿಯ ಕಮಲ ಅರಳಿಸಲು ಅವರು ಬಯಸಿದ್ದಾರೆ, ಮೊದಲು ಅವರಿಗೆ ದಾವಣಗೆರೆಯ ಸಮಸ್ಯೆ ಅರ್ಥವಾಗಲಿ. ಅವರಿಗೆ ಅಡುಗೆ ಮನೆಯಲ್ಲಿ ಅಡುಗೆ ಮಾಡುವುದಷ್ಟೇ ಗೊತ್ತು, ವಿರೋಧ ಪಕ್ಷಕ್ಕೆ ಸಾರ್ವಜನಿಕರ ಮುಂದೆ ಮಾತನಾಡುವ ಶಕ್ತಿ ಇಲ್ಲ, ಕಾಂಗ್ರೆಸ್ ಈ ಪ್ರದೇಶದಲ್ಲಿ ಅಭಿವೃದ್ಧಿ ಕೆಲಸ ಮಾಡಿದೆ” ಎಂದು ಶಿವಶಂಕರಪ್ಪ ಹೇಳಿದ್ದಾರೆ.
ಶಾಮನೂರು ಅವರ ವಯಸ್ಸು 92 ಮತ್ತು ದಾವಣಗೆರೆ ದಕ್ಷಿಣದಿಂದ ಐದು ಬಾರಿ ಶಾಸಕರಾಗಿರುವ ಅವರು ಪಕ್ಷದ ಹಿರಿಯ ಶಾಸಕರೂ ಆಗಿದ್ದಾರೆ. ಅವರ ಸೊಸೆ ಪ್ರಭಾ ಮಲ್ಲಿಕಾರ್ಜುನ್ ಮುಂಬರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ.
ಶಾಮನೂರು ಅವರ ಈ ಮಹಿಳಾ ವಿರೋಧಿ ಹೇಳಿಕೆಗೆ ತಿರುಗೇಟು ನೀಡಿರುವ ಗಾಯತ್ರಿ ಸಿದ್ದೇಶ್ವರ ಅವರು, “ನಾವು ಅಡುಗೆ ಮಾಡಿ ಅಡುಗೆಮನೆಯಲ್ಲಿಯೇ ಇರಬೇಕು ಎಂಬ ರೀತಿಯಲ್ಲಿ ಅವರು ಹೇಳಿದ್ದಾರೆ. ಇಂದು ಮಹಿಳೆಯರು ಯಾವ ವೃತ್ತಿಯಲ್ಲಿದ್ದಾರೆ? ನಾವು ಆಕಾಶದಲ್ಲಿಯೂ ಹಾರುತ್ತಿದ್ದೇವೆ. ಮಹಿಳೆಯರು ಎಷ್ಟು ಪ್ರಗತಿ ಸಾಧಿಸಿದ್ದಾರೆಂದು ವಯಸ್ಸಾದ ಅವರಿಗೆ ತಿಳಿದಿಲ್ಲ. ಎಲ್ಲಾ ಮಹಿಳೆಯರು ಮನೆಯಲ್ಲಿ ಪುರುಷರು, ಮಕ್ಕಳು ಮತ್ತು ಹಿರಿಯರಿಗೆ ಎಷ್ಟು ಪ್ರೀತಿಯಿಂದ ಅಡುಗೆ ಮಾಡುತ್ತಾರೆ ಎಂಬುದೂ ಅವರಿಗೆ ತಿಳಿದಿಲ್ಲ” ಎಂದಿದ್ದಾರೆ.
ಶಿವಶಂಕರಪ್ಪ ಅವರ ಹೇಳಿಕೆಯನ್ನು ಬಿಜೆಪಿ ಖಂಡಿಸಿದ್ದು, ಚುನಾವಣಾ ಆಯೋಗಕ್ಕೆ ದೂರು ನೀಡಿದೆ ಎಂದು ಪಕ್ಷದ ವಕ್ತಾರೆ ಮಾಳವಿಕಾ ಅವಿನಾಶ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.