ತುಮಕೂರು: ಇಂದು ನಡೆದಾಡುವ ದೇವರು ಎಂದೇ ಜನಜನಿತರಾಗಿದ್ದ ಶತಾಯುಷಿ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಯವರ 117ನೇ ಜಯಂತಿ. ತ್ರಿವಿಧ ದಾಸೋಹಿ ಎಂದೇ ಕರೆಯಲ್ಪಡುವ ಶಿವಕುಮಾರ ಸ್ವಾಮೀಜಿಯವರ ಜನ್ಮದಿನದ ಪ್ರಯುಕ್ತ ತುಮಕೂರಿನ ಸಿದ್ದಗಂಗಾ ಮಠದಲ್ಲಿ ವಿವಿಧ ಕಾರ್ಯಕ್ರಮ ಜರುಗುತ್ತಿದೆ. ವಿವಿಧ ಗಣ್ಯರು, ಭಕ್ತರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
ಶ್ರೀ ಶಿವಕುಮಾರ ಸ್ವಾಮೀಜಿಗಳ ಜನ್ಮದಿನದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಅನೇಕ ಗಣ್ಯರು ಪೂಜ್ಯರ ಸೇವೆಯನ್ನು ಸ್ಮರಿಸಿದ್ದಾರೆ.
ಕನ್ನಡದಲ್ಲೇ ಎಕ್ಸ್ ಪೋಸ್ಟ್ ಮಾಡಿರುವ ಮೋದಿ, “ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ಅವರಿಗೆ ನಮನಗಳು. ನಿಸ್ವಾರ್ಥ ಮತ್ತು ಕರುಣೆಯ ನೈಜ ಸಾಕಾರಮೂರ್ತಿಗಳಾಗಿದ್ದ ಶ್ರೀಗಳು ಸಮಾಜ ಸೇವೆಗೆ ಅಪ್ರತಿಮ ಕೊಡುಗೆಗಳನ್ನು ನೀಡಿದ್ದಾರೆ. ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಅಭಿವೃದ್ಧಿಯಲ್ಲಿ ಅವರ ಕೆಲಸವು ಲಕ್ಷಾಂತರ ಜನರ ಜೀವನವನ್ನು ತಲುಪಿದೆ ಮತ್ತು ಸಮರ್ಪಣೆ ಹಾಗೂ ಮಾನವೀಯ ಸೇವೆಗೆ ಅತ್ಯುನ್ನತ ಉದಾಹರಣೆಯಾಗಿದೆ. ನಮ್ಮ ಸಮಾಜದ ಕುರಿತಾಗಿ ಶ್ರೀಗಳ ಆಶಯವನ್ನು ಈಡೇರಿಸುವ ನಿಟ್ಟಿನಲ್ಲಿ ನಾವು ನಿರಂತರ ಕಾರ್ಯಮಗ್ನರಾಗಿರುತ್ತೇವೆ” ಎಂದಿದ್ದಾರೆ.
ಟ್ವಿಟ್ ಮಾಡಿರುವ ಅಮಿತ್ ಶಾ, “ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜನ್ಮಸ್ಮರಣೆಯಂದು ಅವರಿಗೆ ನನ್ನ ಭಕ್ತಿಪೂರ್ವಕ ನಮನಗಳು. ನಡೆದಾಡುವ ದೇವರೆಂದೇ ಪ್ರಸಿದ್ಧರಾದ ಸ್ವಾಮೀಜಿಯವರು ಶ್ರೀ ಸಿದ್ಧಗಂಗಾ ಮಠದ ಮೂಲಕ ಧರ್ಮ ಹಾಗೂ ಬಡವರ ಉನ್ನತಿಗಾಗಿ ತಮ್ಮನ್ನು ತಾವು ಸಂಪೂರ್ಣವಾಗಿ ಸಮರ್ಪಿಸಿಕೊಂಡಿದ್ದರು. ಮಾನವ ಕುಲದ ಉನ್ನತಿಗಾಗಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುವ ಮೂಲಕ ಆಧ್ಯಾತ್ಮಿಕತೆಯ ಅತ್ಯುನ್ನತ ಉದಾಹರಣೆಯನ್ನು ಸ್ಥಾಪಿಸಿದ್ದ ಮಹಾನ್ ಚೇತನ ನಮ್ಮ ಸ್ವಾಮೀಜಿಯವರು. ಅವರ ಸ್ವರ್ಗೀಯ ಆದರ್ಶಗಳು ನಮಗೆ ಸದಾ ಸ್ಪೂರ್ತಿಯಾಗಿದ್ದು ಅವರ ಹಾದಿಯಲ್ಲಿಯೆ ಶಾಶ್ವತವಾಗಿ ಮುಂದುವರೆಯಲು ಪ್ರೇರಣೀಯವಾಗಿವೆ” ಎಂದಿದ್ದಾರೆ.
ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ಅವರಿಗೆ ನಮನಗಳು. ನಿಸ್ವಾರ್ಥ ಮತ್ತು ಕರುಣೆಯ ನೈಜ ಸಾಕಾರಮೂರ್ತಿಗಳಾಗಿದ್ದ ಶ್ರೀಗಳು ಸಮಾಜ ಸೇವೆಗೆ ಅಪ್ರತಿಮ ಕೊಡುಗೆಗಳನ್ನು ನೀಡಿದ್ದಾರೆ. ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಅಭಿವೃದ್ಧಿಯಲ್ಲಿ ಅವರ ಕೆಲಸವು ಲಕ್ಷಾಂತರ ಜನರ ಜೀವನವನ್ನು ತಲುಪಿದೆ ಮತ್ತು ಸಮರ್ಪಣೆ ಹಾಗೂ…
— Narendra Modi (@narendramodi) April 1, 2024
ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜನ್ಮಸ್ಮರಣೆಯಂದು ಅವರಿಗೆ ನನ್ನ ಭಕ್ತಿಪೂರ್ವಕ ನಮನಗಳು.
ನಡೆದಾಡುವ ದೇವರೆಂದೇ ಪ್ರಸಿದ್ಧರಾದ ಸ್ವಾಮೀಜಿಯವರು ಶ್ರೀ ಸಿದ್ಧಗಂಗಾ ಮಠದ ಮೂಲಕ ಧರ್ಮ ಹಾಗೂ ಬಡವರ ಉನ್ನತಿಗಾಗಿ ತಮ್ಮನ್ನು ತಾವು ಸಂಪೂರ್ಣವಾಗಿ ಸಮರ್ಪಿಸಿಕೊಂಡಿದ್ದರು. ಮಾನವ ಕುಲದ ಉನ್ನತಿಗಾಗಿ ನಿಸ್ವಾರ್ಥವಾಗಿ ಸೇವೆ…
— Amit Shah (Modi Ka Parivar) (@AmitShah) April 1, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.