ಮಂಗಳೂರು : ಶಾರದಾ ವಿದ್ಯಾ ಸಂಸ್ಥೆಗಳ ಅಂಗ ಸಂಸ್ಥೆಯಾದ ಮೂಡುಶೆಡ್ಡೆ ಶಿವನಗರದಲ್ಲಿರುವ ಶುಭೋದಯ ವಿದ್ಯಾಲಯಕ್ಕೆ ಕರ್ನಾಟಕ ಬ್ಯಾಂಕಿನ ಪ್ರಯೋಜಕತ್ವದಲ್ಲಿ ನೀಡಲಾದ ಸಿಸಿ.ಕ್ಯಾಮೆರಾ ಅಳವಡಿಕೆಯ ಉದ್ಘಾಟನಾ ಸಮಾರಂಭವು ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿಂದು ಅತ್ಯಂತ ಯಶಸ್ವಿಯಾಗಿ ನೆರೆವೇರಿತು. ಕರ್ನಾಟಕ ಬ್ಯಾಂಕಿನ ಆಡಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿ.ಇ.ಒ) ಶ್ರೀ ಪಿ. ಜಯರಾಮ ಭಟ್ ರಿಮೋಟ್ ಕಂಟ್ರೊಲ್ನ ಬಟನ್ ಒತ್ತುವ ಮೂಲಕ ಉದ್ಘಾಟನೆಗೈದು ಸಂಸ್ಥೆಗ ಹಸ್ತಾಂತರಿಸಿದರು.
ಇಂದು ಈ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಾಗಿರುವವರು ಭವಿಷ್ಯದಲ್ಲಿ ದೊಡ್ಡ-ದೊಡ್ಡ ಹುದ್ದೆಗಳನ್ನು ಅಲಂಕರಿಸಬಹುದು. ಅವರ ವ್ಯಕ್ತಿತ್ವವನ್ನು ರೂಪಿಸುವ ಹೊಣೆಗಾರಿಗೆ ಶಿಕ್ಷಣ ಸಂಸ್ಥೆ, ಶಿಕ್ಷಕರು, ಪಾಲಕರಿಗಿದೆ. ಶಾರದಾ ವಿದ್ಯಾ ಸಂಸ್ಥೆ ಹಾಗೂ ಅಂಗ ಸಂಸ್ಥೆಗಳ ಈ ನಿಟ್ಟಿನಲ್ಲಿ ಅತ್ಯಂತ ಶ್ಲಾಘನೀಯ ಸೇವೆಯನ್ನು ಗೈಯ್ಯುತ್ತಿದೆ. ಶಿಕ್ಷಣ ಕ್ಷೇತ್ರದಲ್ಲಿ ನಾನಾ ಪ್ರಯೋಗಗಳನ್ನು ಗೈಯುವ ಗುಣಮಟ್ಟದ ಶಿಕ್ಷಣ ನೀಡುವ ವಿದ್ಯಾ ಸಂಸ್ಥೆಗಳಿಗೆ ಕರ್ನಾಟಕ ಬ್ಯಾಂಕ್ ಸದಾ ಪ್ರೋತ್ಸಾಹವನ್ನು ನೀಡುತ್ತಾ ಬರುತ್ತಿದೆ ಎಂಬುದಾಗಿ ಶ್ರೀ ಜಯರಾಮ ಭಟ್ ಈ ಸಂದರ್ಭದಲ್ಲಿ ಮಾತಾನಾಡುತ್ತಾ ಹೇಳಿದರು.
ಶಾರದಾ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಪ್ರೊ. ಎಂ.ಬಿ.ಪುರಾಣಿಕ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸತತ ಮೂರನೇ ಅವಧಿಗೆ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿ.ಇ.ಒ) ಹುದ್ದೆಯನ್ನು ಅಲಂಕರಿಸಿದ ಶ್ರೀ ಜಯರಾಮ್ ಭಟ್ ಅವರನ್ನು ಶಾರದಾ ವಿದ್ಯಾ ಸಂಸ್ಥೆಗಳ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಸದಸ್ಯರು ಒಟ್ಟು ಸೇರಿ ಗೌರವಿಸಿದರು.
ಶಾರದಾ ವಿದ್ಯಾ ಸಂಸ್ಥೆಗಳ ಉಪಾಧ್ಯಕ್ಷರಾದ ಉಪಾಧ್ಯಕ್ಷರಾದ ಶ್ರೀ ಕೆ.ಎಸ್.ಕಲ್ಲೂರಾಯ, ಟ್ರಸ್ಟಿ ಶ್ರೀ ಪ್ರದೀಪ ಕುಮಾರ್ ಕಲ್ಕೂರ, ಶಾರದಾ ವಿದ್ಯಾ ಸಂಸ್ಥೆಗಳ ಶೈಕ್ಷಣಿಕ ಸಲಹೆಗಾರರಾದ ಡಾ| ಲೀಲಾ ಉಪಾಧ್ಯಾಯ, ಕರ್ನಾಟಕ ಬ್ಯಾಂಕಿನ ಪಿ.ಆರ್.ಒ. ಶ್ರೀ. ಶ್ರೀನಿವಾಸ ದೇಶಪಾಂಡೆ, ಮೂಡುಶೆಡ್ಡೆ ಗ್ರಾಮ ಪಂಚಾಯಿತಿನ ಅಧ್ಯಕ್ಷ ಶ್ರೀ ಹರಿಪ್ರಸಾದ್ ಶೆಟ್ಟಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಶ್ರೀ. ಯುವರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶುಭೋದಯ ವಿದ್ಯಾಲಯದ ಪ್ರಾಂಶುಪಾಲೆ ಶ್ರೀಮತಿ ಜಯಶ್ರೀ ಪೈ ಸ್ವಾಗತಗೈದರು. ಶಾರದಾ ವಿದ್ಯಾಲಯದ ಉಪ-ಪ್ರಾಂಶುಪಾಲ ಶ್ರೀ ದಯಾನಂದ ಕಟೀಲ್ ಕಾರ್ಯಕ್ರಮ ನಿರ್ವಹಿಸಿದರು. ಆರ್.ಸಿ.ಪಿ.ಎಚ್.ಡಿ. ಟ್ರಸ್ಟಿನ ಕಾರ್ಯದರ್ಶಿ ಶ್ರೀ ಕೆ. ಅನಂತಕೃಷ್ಣ ಭಟ್ ವಂದನಾರ್ಪಣೆಗೈದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.