ನವದೆಹಲಿ: 2024ರ ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆಯನ್ನು ಬಿಜೆಪಿ ಟೀಕಿಸಿದ್ದು, ಅದರಲ್ಲಿ ನ್ಯೂಯಾರ್ಕ್ ಮತ್ತು ಥೈಲ್ಯಾಂಡ್ನ ಫೋಟೋಗಳನ್ನು ಬಳಸಿರುದರಿಂದಲೇ ಅದರ ಗಂಭೀರತೆಯನ್ನು ಅರ್ಥಮಾಡಿಕೊಳ್ಳಬಹುದು ಎಂದು ಹೇಳಿದೆ.
“ಇತ್ತೀಚೆಗೆ ಕಾಂಗ್ರೆಸ್ ಸಾಮಾಜಿಕ ಮಾಧ್ಯಮದ ಮುಖ್ಯಸ್ಥೆ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯನ್ನು ಯಾರು ನಿರ್ವಹಿಸುತ್ತಿದ್ದಾರೆಂದು ನನಗೆ ತಿಳಿದಿಲ್ಲ ಎಂದು ಹೇಳಿದ್ದರು. ಕನಿಷ್ಠ ತಮ್ಮ ಪ್ರಣಾಳಿಕೆಯನ್ನು ಯಾರು ತಯಾರಿಸುತ್ತಿದ್ದಾರೆಂದು ಪಕ್ಷಕ್ಕೆ ತಿಳಿದಿರಬೇಕು” ಎಂದು ಬಿಜೆಪಿಯ ಸುಧಾಂಶು ತ್ರಿವೇದಿ ಕಾಂಗ್ರೆಸ್ ಅನ್ನು ವ್ಯಂಗ್ಯವಾಡಿದ್ದಾರೆ.
ಪರಿಸರ ವಿಭಾಗದಲ್ಲಿ ಬಳಸಲಾದ ಫೋಟೋವನ್ನು ತೋರಿಸಿದ ತ್ರಿವೇದಿ, ಫೋಟೋ ರಾಹುಲ್ ಗಾಂಧಿಯವರ ನೆಚ್ಚಿನ ತಾಣವಾದ ಥಾಯ್ಲೆಂಡ್ನದ್ದು ಎಂದು ಹೇಳಿದ್ದಾರೆ.
“ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಅವರು ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಭಾರತದಲ್ಲಿ ಸೂಜಿಯನ್ನು ಸಹ ತಯಾರಿಸಲಾಗುತ್ತಿರಲಿಲ್ಲ ಎಂದು ಹೇಳಿದ್ದಾರೆ, ಇದು ಸಂಪೂರ್ಣ ಸುಳ್ಳು. ಸಿ.ವಿ. ರಾಮನ್ ಅವರಿಗೆ 1930 ರಲ್ಲಿ ನೊಬೆಲ್ ಪ್ರಶಸ್ತಿ ಸಿಕ್ಕಿತು. ಭಾರತೀಯ ವಿಜ್ಞಾನ ಸಂಸ್ಥೆ (ಬೆಂಗಳೂರು) 1909 ರಲ್ಲಿ ಸ್ಥಾಪನೆಯಾಯಿತು. ಆದರೆ ನೆಹರೂ ಬಂದ ನಂತರವೇ ಎಲ್ಲವೂ ನಡೆದಿದೆ ಎಂದು ಅವರು ನಂಬುತ್ತಲೇ ಇರುತ್ತಾರೆ” ಎಂದು ಬಿಜೆಪಿ ವಕ್ತಾರರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.