ನವದೆಹಲಿ: ಹೊಸ ಮತ್ತು ತಾಜಾ ಆಲೋಚನೆಗಳು, ಉಪಕ್ರಮಗಳು ಮತ್ತು ಸುಧಾರಣೆಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಮಹತ್ವದ ತ್ರಿ-ಸೇವಾ ಸಮ್ಮೇಳನ ʼಪರಿವರ್ತನಾ ಚಿಂತನ್ʼ ಇಂದು ನವದೆಹಲಿಯಲ್ಲಿ ನಡೆಯಲಿದೆ. ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ನೇತೃತ್ವದಲ್ಲಿ ಸಮ್ಮೇಳನದಲ್ಲಿ ಚರ್ಚೆಗಳು ನಡೆಯಲಿವೆ.
ಇದು ಎಲ್ಲಾ ತ್ರಿ-ಸೇವಾ ಸಂಸ್ಥೆಗಳ ಮುಖ್ಯಸ್ಥರು, ಮಿಲಿಟರಿ ವ್ಯವಹಾರಗಳ ಇಲಾಖೆ, ಪ್ರಧಾನ ಕಛೇರಿಯ ಸಮಗ್ರ ರಕ್ಷಣಾ ಸಿಬ್ಬಂದಿ ಮತ್ತು ಮೂರು ಸೇವೆಗಳ ಮೊದಲ ಸಮ್ಮೇಳನವಾಗಿದೆ. ವಿವಿಧ ಸೇವಾ ಆವರಣಗಳ ಅಧಿಕಾರಿಗಳು, ತಮ್ಮ ವೈವಿಧ್ಯಮಯ ತಿಳುವಳಿಕೆ ಮತ್ತು ಅನುಭವದ ಮೂಲಕ ಅಪೇಕ್ಷಿತ “ಜಂಟಿ ಮತ್ತು ಸಮಗ್ರ” ಆಲೋಚಣೆಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಕ್ರಮಗಳನ್ನು ಶಿಫಾರಸು ಮಾಡುತ್ತಾರೆ.
ಯೋಜಿತ ಭವಿಷ್ಯದ ಯುದ್ಧಗಳಿಗೆ ಸಿದ್ಧವಾಗಲು ಭಾರತೀಯ ಸಶಸ್ತ್ರ ಪಡೆಗಳು ತಮ್ಮ ಅನ್ವೇಷಣೆಯಲ್ಲಿ ಪ್ರಮುಖ ಪರಿವರ್ತಕ ಬದಲಾವಣೆಯನ್ನು ಕೈಗೊಳ್ಳುತ್ತಿರುವುದರಿಂದ ಚಿಂತನೆಗಳನ್ನು ರೂಪಿಸಲು ಈ ಸಮ್ಮೇಳನ ಸಹಕಾರಿಯಾಗಲಿದೆ. ತ್ರಿ-ಸೇವಾ ಬಹು ಡೊಮೇನ್ ಕಾರ್ಯಾಚರಣೆಗಳನ್ನು ಸಕ್ರಿಯಗೊಳಿಸಲು ಜಂಟಿ ಮತ್ತು ಏಕೀಕರಣವನ್ನು ಉತ್ತೇಜಿಸಲು ಉಪಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಚರ್ಚೆ ನಡೆಯಲಿದೆ ಎಂದು ರಕ್ಷಣಾ ಸಚಿವಾಲಯ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.