ಕೋಲ್ಕತ್ತಾ: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆಯಲ್ಲಿ ದೊಡ್ಡ ಮುನ್ನಡೆ ದೊರೆತಿದ್ದು, ಪ್ರಕರಣದ ಇಬ್ಬರು ಪ್ರಮುಖ ಶಂಕಿತರನ್ನು ಪಶ್ಚಿಮ ಬಂಗಾಳದಲ್ಲಿ ಎನ್ಐಎ ವಶಕ್ಕೆ ಪಡೆದಿದೆ. ಐಇಡಿ ಸ್ಫೋಟ ನಡೆಸಿದ ಎಂ.ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಆತನ ಸಹಚರ ಅಬ್ದುಲ್ ಮತೀನ್ ತಾಹಾ ಅವರನ್ನು ಪಶ್ಚಿಮ ಬಂಗಾಳದಲ್ಲಿ ಎನ್ಐಎ ಬಂಧಿಸಿದೆ.
ಎನ್ಐಎ ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿದ್ದು, ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಅದ್ಬುಲ್ ಮಥೀನ್ ತಾಹಾ ಮತ್ತು ಮುಸ್ಸಾವಿರ್ ಹುಸೇನ್ ಶಾಝೇಬ್ ಅವರನ್ನು ಕೋಲ್ಕತ್ತಾ ಬಳಿಯ ಅವರ ಅಡಗುತಾಣದಿಂದ ಪತ್ತೆಹಚ್ಚಲಾಗಿದೆ ಮತ್ತು ಎನ್ಐಎ ತಂಡವು ಅವರನ್ನು ಬಂಧಿಸಿದೆ. ಮುಸ್ಸಾವಿರ್ ಹುಸೇನ್ ಶಾಜಿಬ್ ಕೆಫೆಯಲ್ಲಿ ಐಇಡಿ ಇರಿಸಿದ ಆರೋಪಿ ಮತ್ತು ಅಬ್ದುಲ್ ಮಥೀನ್ ತಾಹಾ ಯೋಜನೆ, ಸ್ಫೋಟದ ಕಾರ್ಯಗತಗೊಳಿಸುವಿಕೆ ಮತ್ತು ನಂತರ ಕಾನೂನಿನ ಹಿಡಿತದಿಂದ ತಪ್ಪಿಸಿಕೊಳ್ಳುವ ಮಾಸ್ಟರ್ಮೈಂಡ್” ಎಂದಿದೆ.
The absconders in the Rameswaram Cafe blast case, Adbul Matheen Taha and Mussavir Hussain Shazeb were traced out to their hideout near Kolkata and were apprehended by the NIA team.
Mussavir Hussain Shazib is the accused who placed the IED at the Café and Abdul Matheen Taha is… pic.twitter.com/gZ3odYGq7N
— ANI (@ANI) April 12, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.