ನವದೆಹಲಿ: ಜಲಿಯನ್ ವಾಲಾಬಾಗ್ ಹತ್ಯಾಕಾಂಡದಲ್ಲಿ ಹುತಾತ್ಮರಾದ ವೀರರ ಸ್ಮರಣೆಯನ್ನು ಇಂದು ದೇಶವ್ಯಾಪಿ ಮಾಡಲಾಗುತ್ತಿದೆ. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಜನರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಮನಗಳನ್ನು ಸಲ್ಲಿಸಿದ್ದಾರೆ ಮತ್ತು ಆ ಹುತಾತ್ಮರ ದೇಶಭಕ್ತಿಯ ಮನೋಭಾವವು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ ಎಂದು ಹೇಳಿದ್ದಾರೆ.
ವಸಾಹತುಶಾಹಿ ಆಡಳಿತಕ್ಕೆ ದಮನಕಾರಿ ಅಧಿಕಾರವನ್ನು ನೀಡಿದ ರೌಲತ್ ಕಾಯಿದೆಯ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸಿದ ನೂರಾರು ಜನರನ್ನು ಬ್ರಿಟಿಷ್ ಪಡೆಗಳು ಯಾವುದೇ ಪ್ರಚೋದನೆ ಇಲ್ಲದೆ 1919 ರ ಈ ದಿನ ಪಂಜಾಬ್ನ ಅಮೃತಸರದ ಜಲಿಯನ್ವಾಲಾ ಬಾಗ್ನಲ್ಲಿ ಗುಂಡಿಕ್ಕಿ ಕೊಂದರು.
“ಜಲಿಯನ್ವಾಲಾಬಾಗ್ನಲ್ಲಿ ಮಾತೃಭೂಮಿಗಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ಎಲ್ಲ ಸ್ವಾತಂತ್ರ್ಯ ಹೋರಾಟಗಾರರಿಗೆ ನನ್ನ ಭಾವಪೂರ್ಣ ಶ್ರದ್ಧಾಂಜಲಿ! ಸ್ವರಾಜ್ಯಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಎಲ್ಲಾ ಮಹಾನ್ ಚೇತನಗಳಿಗೆ ದೇಶವಾಸಿಗಳು ಯಾವಾಗಲೂ ಋಣಿಯಾಗಿರುತ್ತಾರೆ. ಆ ಹುತಾತ್ಮರ ದೇಶಪ್ರೇಮದ ಸ್ಪೂರ್ತಿಯು ಎಂದೆಂದಿಗೂ ಇರುತ್ತದೆ ಎಂದು ನನಗೆ ಖಾತ್ರಿಯಿದೆ. ಇದು ಮುಂಬರುವ ಪೀಳಿಗೆಗೆ ಸ್ಫೂರ್ತಿ ನೀಡಲಿ” ಎಂದು ರಾಷ್ಟ್ರಪಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಕೂಡ ಜಲಿಯನ್ವಾಲಾ ಬಾಗ್ ಹತ್ಯಾಕಾಂಡದ ಹುತಾತ್ಮರನ್ನು ಸ್ಮರಿಸಿ ಎಕ್ಸ್ ಪೋಸ್ಟ್ ಮಾಡಿದ್ದಾರೆ. “ದೇಶಾದ್ಯಂತ ನನ್ನ ಕುಟುಂಬದ ಸದಸ್ಯರ ಪರವಾಗಿ, ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಎಲ್ಲಾ ವೀರ ಹುತಾತ್ಮರಿಗೆ ನನ್ನ ಆಳವಾದ ಗೌರವವನ್ನು ಸಲ್ಲಿಸುತ್ತೇನೆ” ಎಂದಿದ್ದಾರೆ. ಅಲ್ಲದೇ ಇದಕ್ಕೆ ಸಂಬಂಧಿಸಿದ ಒಂದು ವಿಡಿಯೋವನ್ನು ಕೂಡ ಹಂಚಿಕೊಂಡಿದ್ದಾರೆ.
जलियांवाला बाग नरसंहार के सभी वीर शहीदों को देशभर के मेरे परिवारजनों की ओर से कोटि-कोटि नमन। pic.twitter.com/Ow1jtjXdd0
— Narendra Modi (@narendramodi) April 13, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.