ನವದೆಹಲಿ: ದೇಶದ ಸುರಕ್ಷತೆಯನ್ನು ಖಾತ್ರಿಪಡಿಸಿಕೊಳ್ಳುವುದರಿಂದ ಹಿಡಿದು ನೈಸರ್ಗಿಕ ವಿಕೋಪ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳುವವರೆಗೆ, ಭಾರತದ ಸಶಸ್ತ್ರ ಪಡೆಗಳು ದೇಶಕ್ಕೆ ಸಹಾಯ ಮಾಡುವಲ್ಲಿ ಸಾಕಷ್ಟು ಮುಂಚೂಣಿಯಲ್ಲಿದೆ.
ಸಾರ್ವತ್ರಿಕ ಚುನಾವಣೆಗಳು ಸಮೀಪಿಸುತ್ತಿರುವಂತೆ, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ನಡೆಸುವ ನಿಟ್ಟಿನಲ್ಲಿ ಸಹಾಯ ಮಾಡಲು ಸಶಸ್ತ್ರ ಪಡೆಗಳು ಮತ್ತೊಮ್ಮೆ ಮುಂಚೂಣಿಯಲ್ಲಿ ಬಂದು ನಿಂತಿವೆ.
ನಕ್ಸಲ್ ಪೀಡಿತ ಪ್ರದೇಶದ ಮತಗಟ್ಟೆಗಳಿಗೆ ಚುನಾವಣಾ ತಂಡಗಳ ಸುರಕ್ಷಿತ ಆಗಮನಕ್ಕೆ ಅನುಕೂಲವಾಗುವಂತೆ ಭಾರತೀಯ ವಾಯುಪಡೆಯ ಎಂಐ-17 ಹೆಲಿಕಾಪ್ಟರ್ಗಳನ್ನು ಹೆಲಿ ಡ್ರಾಪಿಂಗ್ ಮಾಡಲು ನಿಯೋಜಿಸಲಾಗಿದೆ.
ಛತ್ತೀಸ್ಗಢದ ಬಿಜಾಪುರ ಜಿಲ್ಲಾಧಿಕಾರಿ ಅನುರಾಗ್ ಪಾಂಡೆ ಮತ್ತು ಬಿಜಾಪುರ ಎಸ್ಪಿ ಜಿತೇಂದ್ರ ಯಾದವ್ ಅವರು ಶಾಂತಿಯುತ ಮತದಾನ ಪ್ರಕ್ರಿಯೆ ಮತ್ತು ಚುನಾವಣಾ ಅಧಿಕಾರಿಗಳು ಮತ್ತು ಮತದಾರರಿಗೆ ಸುರಕ್ಷಿತ ವಾತಾವರಣದ ಭರವಸೆ ನೀಡಿದರು ಮತ್ತು ವಾಯುಸೇನಾ ಹೆಲಿಕಾಫ್ಟರ್ಗಳ ನಿಯೋಜನೆಯನ್ನು ಖಚಿತಪಡಿಸಿದರು.
ಅತೀ ಸೂಕ್ಷ್ಮ ಪ್ರದೇಶದಲ್ಲಿ 48 ಯೂನಿಟ್ ಇವಿಎಂಗಳು ಮತ್ತು ಮತಗಟ್ಟೆ ತಂಡಗಳನ್ನು ಹೆಲಿ ಡ್ರಾಪ್ ಮಾಡಲು 6 ಐಎಎಫ್ ಹೆಲಿಕಾಪ್ಟರ್ಗಳನ್ನು ನಿಯೋಜಿಸಲಾಗಿದೆ ಎಂದು ಗಡ್ಚಿರೋಲಿ ಎಸ್ಪಿ ನೀಲೋತ್ಪಾಲ್ ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.