ರಾಯ್ಪುರ: ಮಂಗಳವಾರ ಛತ್ತೀಸ್ಗಢದ ಕಂಕೇರ್ ಜಿಲ್ಲೆಯಲ್ಲಿ ಪೊಲೀಸರು ನಡೆಸಿದ ಎನ್ಕೌಂಟರ್ನಲ್ಲಿ ಕನಿಷ್ಠ 29 ನಕ್ಸಲೀಯರು ಹತರಾಗಿದ್ದಾರೆ ಎಂದು ಗಡಿ ಭದ್ರತಾ ಪಡೆ ತಿಳಿಸಿದೆ.
“ಹೆಚ್ಚಿನ ಸಂಖ್ಯೆಯ ನಕ್ಸಲರನ್ನು ತಟಸ್ಥಗೊಳಿಸಲಾಗಿದೆ. ಭದ್ರತಾ ಪಡೆಗಳ ಯೋಧರನ್ನು ನಾನು ಅಭಿನಂದಿಸುತ್ತೇನೆ. ನಾವೆಲ್ಲರೂ ಸಿಎಂ ವಿಷ್ಣು ದೇವ್ ಸಾಯಿ ಅವರ ನೇತೃತ್ವದಲ್ಲಿ ಕೆಲಸ ಮಾಡುತ್ತಿದ್ದೇವೆ. ಕೇಂದ್ರದ ಗೃಹಸಚಿವ ಅಮಿತ್ ಶಾ ನಮಗೆ ಮಾರ್ಗದರ್ಶನ ನೀಡುತ್ತಿದ್ದಾರೆ.ಅಗತ್ಯವಿರುವ ಎಲ್ಲವನ್ನು ಮಾಡಲಾಗುವುದು. ಮುಂದಿನ ದಿನಗಳಲ್ಲಿ ನಕ್ಸಲ್ ಮುಕ್ತ ಬಸ್ತಾರ್ ನಿರ್ಮಾಣಕ್ಕೆ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗುವುದು. ಮಾತುಕತೆಗೆ ಸರ್ಕಾರ ಸಿದ್ಧವಾಗಿದೆ. ಬಸ್ತಾರ್ನಲ್ಲಿ ಶಾಂತಿ ನೆಲೆಸಬೇಕು” ಎಂದು ಛತ್ತೀಸ್ಗಢ ಉಪ ಮುಖ್ಯಮಂತ್ರಿ ವಿಜಯ್ ಶರ್ಮಾ ಹೇಳಿದ್ದಾರೆ.
ಎನ್ಕೌಂಟರ್ನಲ್ಲಿ ಹತರಾದ ನಕ್ಸಲೀಯರಲ್ಲಿ ಅಗ್ರ ನಾಯಕ ಶಂಕರ್ ರಾವ್ ಅವರ ತಲೆಗೆ ರೂ.25 ಲಕ್ಷ ಬಹುಮಾನವಿತ್ತು. ಇದೇ ವೇಳೆ ಎನ್ಕೌಂಟರ್ನಲ್ಲಿ ಗಾಯಗೊಂಡ ಮೂವರು ಪೊಲೀಸರು ಅಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಯೋಧರನ್ನು ಉತ್ತಮ ಚಿಕಿತ್ಸೆಗಾಗಿ ಉನ್ನತ ಕೇಂದ್ರಕ್ಕೆ ವಿಮಾನದಲ್ಲಿ ರವಾನಿಸಲಾಗುತ್ತಿದೆ.
ಭದ್ರತಾ ಸಿಬ್ಬಂದಿಗಳು ಸ್ಥಳದಿಂದ AK 47 ರೈಫಲ್, ಇತರ ರೈಫಲ್ಗಳು ಮತ್ತು ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.