ಸೂರತ್: ಬಿಜೆಪಿಯ ಮುಖೇಶ್ ದಲಾಲ್ ಹೊರತುಪಡಿಸಿ ಎಲ್ಲಾ ಅಭ್ಯರ್ಥಿಗಳು ಸೂರತ್ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಹಿಂಪಡೆದಿದ್ದಾರೆ. ಇಂದಿನವರೆಗೆ ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿ ಮಾತ್ರ ಕಣದಲ್ಲಿದ್ದಾರೆ.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ನೀಲೇಶ್ ಕುಂಭಾಣಿ ಅವರ ನಾಮಪತ್ರ ತಿರಸ್ಕೃತಗೊಂಡ ಒಂದು ದಿನದ ನಂತರ ಈ ಬೆಳವಣಿಗೆ ಸಂಭವಿಸಿದೆ, ಅವರ ಮೂವರು ಪ್ರತಿಪಾದಕರು ತಮ್ಮ ನಾಮಪತ್ರಕ್ಕೆ ಸಹಿ ಮಾಡಿಲ್ಲದ ಕಾರಣ ಅವರ ನಾಮಪತ್ರ ತಿರಸ್ಕೃತಗೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗೆ ಅಫಿಡವಿಟ್ನಲ್ಲಿ ಹೇಳಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾಣಿ ಅವರ ನಾಮಪತ್ರ ರದ್ದತಿಯಾಗಿದೆ, ಏಳು ಸ್ವತಂತ್ರ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ವಿರೋಧವನ್ನು ಎದುರಿಸದೆ ಗೆಲುವು ಸಾಧಿಸಲು ಬಿಜೆಪಿ ಸಜ್ಜಾಗಿದೆ.
ಬಿಜೆಪಿಯ ಮುಖೇಶ್ ದಲಾಲ್ ಅವರನ್ನು ಅವಿರೋಧವಾಗಿ ಸಂಸದರಾಗಿ ಘೋಷಿಸಲು ವೇದಿಕೆ ಸಜ್ಜಾಗಿದೆ. ಈ ಐತಿಹಾಸಿಕ ಬೆಳವಣಿಗೆಯು ಭಾರತದ ಚುನಾವಣಾ ಸನ್ನಿವೇಶದಲ್ಲಿ ಮಹತ್ವದ ಕ್ಷಣವನ್ನು ಸೂಚಿಸುತ್ತದೆ. ಸಂಸದೀಯ ಅಥವಾ ವಿಧಾನಸಭಾ ಚುನಾವಣೆಗಳಲ್ಲಿ ಅಭ್ಯರ್ಥಿಯನ್ನು ಅವಿರೋಧವಾಗಿ ಚುನಾಯಿತ ಎಂದು ಘೋಷಿಸುವ ಪರಿಕಲ್ಪನೆಯು ಭಾರತದ ಪ್ರಜಾಪ್ರಭುತ್ವದಲ್ಲಿ ಅಪರೂಪ.
ಲೋಕಸಭಾ ಚುನಾವಣೆಯ ಅವಿರೋಧ ಆಯ್ಕೆಯ ಕೊನೆಯ ನಿದರ್ಶನವು 1989 ರಲ್ಲಿ ನಡೆದಿತ್ತು. ಮೊಹಮ್ಮದ್ ಶಫಿ ಭಟ್ ಶ್ರೀನಗರದಿಂದ ಆಯ್ಕೆಯಾಗಿದ್ದರು. ಅಂದಿನಿಂದ, ಅವಿರೋಧ ಆಯ್ಕೆಯ ಪ್ರಸಂಗ ನಡೆದಿಲ್ಲ. ಸೂರತ್ನ ಮುಂಬರುವ ಅವಿರೋಧ ಚುನಾವಣಾ ವಿಜಯವು ಗಮನಾರ್ಹ ಮಹತ್ವದ ಪಡೆದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.