ನವದೆಹಲಿ: ಇವಿಎಂ-ವಿವಿಪ್ಯಾಟ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್ನ ತೀರ್ಪಿನ ಕುರಿತು ಶುಕ್ರವಾರ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ, ಆರ್ಜೆಡಿ ಮತ್ತು ಕಾಂಗ್ರೆಸ್ಗೆ ಭಾರತದ ಸಂವಿಧಾನದ ಬಗ್ಗೆ ಎಂದಿಗೂ ಕಾಳಜಿ ಇಲ್ಲ ಎಂದು ಹೇಳಿದ್ದಾರೆ.
ಬಿಹಾರದ ಅರಾರಿಯಾದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಹಿಂದಿನ ಆಡಳಿತದಲ್ಲಿ ಬೂತ್ ವಶಪಡಿಸಿಕೊಳ್ಳುವುದು ತುಂಬಾ ಸಾಮಾನ್ಯವಾಗಿತ್ತು. ಬಿಹಾರದ ಮುಸ್ಲಿಮರನ್ನು ಒಬಿಸಿ ಕೋಟಾದಡಿ ತರಲು ಕಾಂಗ್ರೆಸ್ ಯೋಜನೆ ರೂಪಿಸುತ್ತಿದೆ ಎಂದು ಆರೋಪಿಸಿದರು.
ಪ್ರತಿಪಕ್ಷಗಳು ಇವಿಎಂಗಳನ್ನು ತೊಲಗಿಸಲು ಪ್ರಯತ್ನಿಸುತ್ತಿವೆ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು.
“ಬಿಹಾರದಲ್ಲಿ ಆರ್ಜೆಡಿ ಮತ್ತು ಕಾಂಗ್ರೆಸ್ ಮೈತ್ರಿಯು ಭಾರತದ ಸಂವಿಧಾನದ ಬಗ್ಗೆಯಾಗಲಿ ಅಥವಾ ಪ್ರಜಾಪ್ರಭುತ್ವದ ಬಗ್ಗೆಯಾಗಲಿ ಕಾಳಜಿ ವಹಿಸುವುದಿಲ್ಲ. ಅವರು ದಶಕಗಳಿಂದ ಜನರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಲು ಬಿಡಲಿಲ್ಲ. ಬೂತ್ ವಶಪಡಿಸಿಕೊಳ್ಳುವುದು ತುಂಬಾ ಸಾಮಾನ್ಯವಾಗಿತ್ತು. ಅವರು ಜನರಿಗೆ ಬೂತ್ನತ್ತ ಹೆಜ್ಜೆ ಹಾಕಲು ಸಹ ಬಿಡಲಿಲ್ಲ” ಎಂದು ಪ್ರಧಾನಿ ಮೋದಿ ಹೇಳಿದರು.
“ಈಗ ಬಡವರು ಮತ್ತು ಪ್ರಾಮಾಣಿಕ ಮತದಾರರು ಇವಿಎಂ ಬಲವನ್ನು ಹೊಂದಿರುವಾಗ, ಅವರು ಇವಿಎಂ ತೊಡೆದುಹಾಕಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಇಂದು, ಹಳೆಯ ಬ್ಯಾಲೆಟ್ ಪೇಪರ್ ಮತದಾನದ ಪದ್ಧತಿ ಬೇಡ ಎಂದು ಸುಪ್ರೀಂ ಕೋರ್ಟ್ ಬಲವಾದ ತೀರ್ಪು ನೀಡಿದೆ” ಎಂದಿದ್ದಾರೆ.
ಕರ್ನಾಟಕದಂತೆಯೇ ಕಾಂಗ್ರೆಸ್ ಮುಸ್ಲಿಮರನ್ನು ಒಬಿಸಿ ಮೀಸಲಾತಿಯ ವ್ಯಾಪ್ತಿಗೆ ತರಲು ಬಯಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
“ಕಾಂಗ್ರೆಸ್ ಎಸ್ಸಿ, ಎಸ್ಟಿ ಮತ್ತು ಒಬಿಸಿಗಳ ಹಕ್ಕುಗಳನ್ನು ಕಸಿದುಕೊಳ್ಳಲು ಆಳವಾದ ಪಿತೂರಿ ನಡೆಸಿದೆ ಮತ್ತು ನಾನು ಇದನ್ನು ಅತ್ಯಂತ ಜವಾಬ್ದಾರಿಯಿಂದ ಹೇಳುತ್ತಿದ್ದೇನೆ. ಬಾಬಾಸಾಹೇಬ್ ಭೀಮರಾವ್ ಅಂಬೇಡ್ಕರ್ ಅವರು ಭಾರತವು ಧರ್ಮ ಆಧಾರಿತ ಮೀಸಲಾತಿಯನ್ನು ಹೊಂದಲು ಸಾಧ್ಯವಿಲ್ಲ ಎಂದು ಸ್ಪಷ್ಟವಾದ ಮಾತುಗಳಲ್ಲಿ ಹೇಳಿದ್ದಾರೆ” ಎಂದು ಅವರು ಪ್ರತಿಪಾದಿಸಿದರು. .
ಕರ್ನಾಟಕದಲ್ಲಿ ಒಬಿಸಿಗಳಿಗೆ ಶೇ 27ರಷ್ಟು ಕೋಟಾದಲ್ಲಿ ಮುಸ್ಲಿಮರು ಸಿಂಹಪಾಲು ಪಡೆಯುತ್ತಾರೆ ಎಂದು ಪ್ರಧಾನಿ ಮೋದಿ ಹೇಳಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.