ಹೈದರಾಬಾದ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭಾಷಣದ ನಕಲಿ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಪ್ರಕರಣದಲ್ಲಿ ದೆಹಲಿ ಪೊಲೀಸರು ಮೇ 1 ರಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರನ್ನು ವಿಚಾರಣೆಗೆ ಕರೆದಿದ್ದಾರೆ ಮತ್ತು ಕೆಲವು ಬಿಜೆಪಿ ಆಡಳಿತದ ರಾಜ್ಯಗಳ ಪೊಲೀಸರು ಕೂಡ ಕ್ರಮಕ್ಕೆ ಮುಂದಾಗಿದ್ದಾರೆ. ಅಸ್ಸಾಂನಲ್ಲಿ ಈಗಾಗಲೇ ಮೊದಲ ಬಂಧನವಾಗಿದೆ.
ಬಿಜೆಪಿ ಕ್ರಮದಿಂದ ಕುಪಿತಗೊಂಡಿರುವ ಕಾಂಗ್ರೆಸ್, ಇದೀಗ ತನ್ನ ಆಡಳಿತವಿರುವ ರಾಜ್ಯಗಳಲ್ಲಿ ಬಿಜೆಪಿ ನಾಯಕರ ವಿರುದ್ಧ ಇದೇ ರೀತಿಯ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದೆ.
ಬಿಜೆಪಿಯು ಕಾಂಗ್ರೆಸ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಚುನಾವಣಾ ಪ್ರಕ್ರಿಯೆಯನ್ನು ಹಳಿತಪ್ಪಿಸಲು ಶಾ ಅವರ “ಡೀಪ್ ಫೇಕ್ ಮತ್ತು ಮಾರ್ಫ್ಡ್” ವಿಡಿಯೋವನ್ನು ಕಾಂಗ್ರೆಸ್ ಪ್ರಸಾರ ಮಾಡಿದೆ ಎಂದು ಆರೋಪಿಸಿದೆ. ಪಕ್ಷದ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದೆ.
ಎಕ್ಸ್ನಲ್ಲಿ ನಕಲಿ ವಿಡಿಯೋ ಪೋಸ್ಟ್ ಮಾಡಿದ ತೆಲಂಗಾಣ ಕಾಂಗ್ರೆಸ್ನ ಮುಖ್ಯಸ್ಥ ರೆಡ್ಡಿ ಸೇರಿದಂತೆ ಐವರು ಸದಸ್ಯರಿಗೆ ನೋಟಿಸ್ಗಳನ್ನು ದೆಹಲಿ ಪೊಲೀಸರ ವಿಶೇಷ ದಳದ ತಂಡಗಳು ಮುಖ್ಯಮಂತ್ರಿ ಕಚೇರಿಗೆ ಮತ್ತು ಹೈದರಾಬಾದ್ನ ಗಾಂಧಿ ಭವನದಲ್ಲಿರುವ ಪಕ್ಷದ ಕಚೇರಿಗೆ ಹಸ್ತಾಂತರಿಸಿದೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.