ಬೆಂಗಳೂರು: ನೇಹಾ ಹತ್ಯೆ ಪ್ರಕರಣವನ್ನು ಮೂರು ತಿಂಗಳ ನಂತರ ಜನರು ಮರೆತ ಬಳಿಕ ಮುಚ್ಚಿ ಹಾಕಲು ಪ್ರಯತ್ನ ನಡೆದಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆಕ್ಷೇಪಿಸಿದರು.
ಹುಬ್ಬಳ್ಳಿಯಲ್ಲಿ ಕಾಲೇಜ್ ಕ್ಯಾಂಪಸ್ ನಲ್ಲಿ ಇತ್ತೀಚೆಗೆ ಬರ್ಬರವಾಗಿ ಹತ್ಯೆಗೀಡಾದ ನೇಹಾ ಹಿರೇಮಠ ಅವರ ನಿವಾಸಕ್ಕೆ ಇಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಭೇಟಿ ನೀಡಿ, ನಿರಂಜನ ಹಿರೇಮಠ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ತಿಳಿಸಿದ್ದಾರೆ.
ಸಮರ್ಥ ಸಾಕ್ಷಿ ಬೇಕು. ದಾಖಲೆಗಳನ್ನು ಸರಿಯಾಗಿ ಸಂಗ್ರಹಿಸಬೇಕಿತ್ತು. ಕಳೆದ ಹತ್ತಾರು ದಿನಗಳಿಂದ ಆತನ ಜೊತೆ ಸಂಪರ್ಕದಲ್ಲಿದ್ದವರ ಫೋನ್ ಕರೆಗಳ ವಿವರ ಯಾಕೆ ಸಂಗ್ರಹಿಸಿಲ್ಲ? ಯಾಕೆ ಇದನ್ನು ಮಾಡಿಲ್ಲ? ಅವನು ಮಾದಕ ದ್ರವ್ಯ ಸೇವನೆ ಮಾಡಿದ್ದನೇ? ಬೇರೆ ಏನಾದರೂ ಲಿಂಕ್ ಇತ್ತೇ? ಕೆಎಫ್ಡಿ, ಪಿಎಫ್ಐನಂಥ ಸಮಾಜವಿರೋಧಿ ಸಂಘಟನೆಯೊಂದಿಗೆ ಸಂಪರ್ಕ ಇತ್ತೇ ಎಂದು ಮಾಹಿತಿ ಪಡೆಯಲಾಗಿದೆ ಎಂದು ಹೇಳಿದರು.
ಗೃಹ ಸಚಿವರು, ಪೊಲೀಸ್ ಇಲಾಖೆಗೆ ಸಾಮಾನ್ಯ ಜ್ಞಾನ ಇರಬೇಕು. ಇಂಥ ಕೊಲೆ ಆದಾಗ ಡಬಲ್ ಅಲರ್ಟ್ ಆಗಿರಬೇಕು. ತನಿಖೆ ಮಾಡುವವರು ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಕೇಳಬೇಕಿಲ್ಲವೇ? ಸಾಕ್ಷ್ಯಗಳನ್ನು ಸಂಗ್ರಹಿಸಬೇಕಿಲ್ಲವೇ? ಕಾನೂನಿನಡಿ ಇರುವ ಕ್ರಮವನ್ನು ಯಾಕೆ ತೆಗೆದುಕೊಂಡಿಲ್ಲ? ಆರೋಪಿಯನ್ನು ಜೈಲಿಗೆ (ಜುಡಿಷಿಯಲ್ ಕಸ್ಟಡಿ) ಕಳಿಸಿದ ಬಳಿಕ ಯಾರ್ಯಾರು ಭೇಟಿ ಮಾಡಿದ್ದರು? ಬಚಾವ್ ಮಾಡಲು ಸಲಹೆ ಕೊಟ್ಟಿರುವ ಸಾಧ್ಯತೆ ಇರಬಹುದಲ್ಲವೇ ಎಂದು ಕೇಳಿದರು.
ನೇಹಾ ಹತ್ಯೆ ಖಂಡಿಸಿ, ದೇಶಾದ್ಯಂತ ಅಮೇರಿಕ, ಲಂಡನ್ನಲ್ಲೂ ಪ್ರತಿಭಟನೆಗಳು ನಡೆಯುತ್ತಿವೆ. ನೇಹಾ ಹತ್ಯೆ ಪ್ರಕರಣದ ಆರೋಪಿ ಬಚಾವ್ ಆಗಲು ಪೊಲೀಸ್ ಇಲಾಖೆ, ಸರಕಾರವೇ ಅವಕಾಶ ಮಾಡಿಕೊಟ್ಟಿದೆ ಎಂದು ನೇರವಾಗಿ ಆರೋಪಿಸಿದರು. ಈ ಕೊಲೆ ಹಿಂದೆ ಯಾರಿದ್ದಾರೆ? ಕೊಲೆಗೆ ಬಳಸಿದ ಆಯುಧವನ್ನು ಎಲ್ಲಿಂದ ಖರೀದಿಸಲಾಯಿತು ಎಂಬ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಇಡೀ ಕುಟುಂಬದ 20 ವರ್ಷಗಳ ಹಿನ್ನೆಲೆ ಏನು? ಅವರಿಗೆ ಯಾರ್ಯಾರ ಜೊತೆ ಸಂಪರ್ಕ ಇದೆ ಎಂಬ ಮಾಹಿತಿ ತಿಳಿಯಬೇಕಿತ್ತು.
ವಿಶೇಷ ಪ್ರಕರಣವಾಗಿದ್ದರೂ ಲವ್ ಜಿಹಾದ್ ಎಂದರೆ ತಮಗೆ ಕೆಟ್ಟ ಹೆಸರು ಬರಬಹುದೆಂದು, ಅದನ್ನು ತಪ್ಪಿಸಲು ಸರಕಾರವು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ ಮಾಡಿಲ್ಲ. ಹಾಗೂ ಆರೋಪಿಯನ್ನು ಕಸ್ಟಡಿಗೆ ಪಡೆದಿಲ್ಲ ಎಂದು ಆರೋಪಿಸಿದರು. ಸರ್ಕಾರವು ನೊಂದ ಕುಟುಂಬವು ಹಿಂದೆ ಕೊಡಿ ಎಂದರೆ ಕೊಡಬೇಕು. ಚಿಕಿತ್ಸೆಡಿಗೆ ಅಥವಾ ಎಸ್ಐಟಿಗೆ ಕೊಡಿ ಎಂದರೂ ಕೊಡಬೇಕಿತ್ತು. ಇದು ಸಾಮಾನ್ಯ ಶಿಕ್ಷಣ ಎಂದು ನಡೆಸಲಾಯಿತು.
ಕಾಲೇಜು ಕ್ಯಾಂಪಸ್ಗಳೂ ಸುರಕ್ಷಿತವಲ್ಲ; ಅಲ್ಲಿಯೂ ಕೂಡ ಮಕ್ಕಳ ಹತ್ಯೆ ಆಗಬಹುದು ಎಂಬುದಕ್ಕೆ ಒಂದು ಉದಾಹರಣೆ. ಇದು ಕಾಲೇಜು ಕ್ಯಾಂಪಸ್ನಲ್ಲಿ ಆದ ಇಂಥ ಮೊದಲ ದುರ್ಘಟನೆ ಎಂದು ಬೇಸರ ವ್ಯಕ್ತಪಡಿಸಿದರು. ಲವ್ ಜಿಹಾದ್ಗಾಗಿ ಈ ಘಟನೆ ಆಗಿದ್ದು, ರಾಜ್ಯವೇ ತಲೆತಗ್ಗಿಸುವ ಬಗ್ಗೆ ಆಕ್ಷೇಪಿಸಿದರು. ಈ ಸಂದರ್ಭದಲ್ಲಿ ಮಹೇಶ ಟೆಂಗಿನಕಾಯಿ ಶಾಸಕ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.