ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರ ಶ್ರೀ ರಾಮ ಜನ್ಮಭೂಮಿಯ ರಾಮ ಮಂದಿರಕ್ಕೆ ಭೇಟಿಕೊಟ್ಟು ರಾಮ ಲಲಾನ ದರ್ಶನ-ಪೂಜೆ ನೆರವೇರಿಸಿದರು.
ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು ಅಯೋಧ್ಯೆಯ ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿ ಮುರ್ಮು ಅವರನ್ನು ಸ್ವಾಗತಿಸಿದರು. ವಿಮಾನ ನಿಲ್ದಾಣದಿಂದ ರಾಷ್ಟ್ರಪತಿಗಳು ಹನುಮಂತನಿಗೆ ಪ್ರಾರ್ಥನೆ ಸಲ್ಲಿಸಲು ಹನುಮಾನ್ಗರ್ಹಿ ತಲುಪಿದರು. ಅವರು ನಿನ್ನೆ ಸಂಜೆ ಪೂರ್ಣ ವಿಧಿವಿಧಾನಗಳೊಂದಿಗೆ ನೆರವೇರಿದ ಸರಯು ಆರತಿಯಲ್ಲಿ ಪಾಲ್ಗೊಂಡರು.
ಹೊಸದಾಗಿ ನಿರ್ಮಿಸಲಾದ ದೇವಾಲಯಕ್ಕೆ ಇದು ದ್ರೌಪದಿ ಮುರ್ಮು ಅವರ ಮೊದಲ ಭೇಟಿಯಾಗಿದ್ದು, ಜನವರಿ 22 ರಂದು ನಡೆದ ಪ್ರಾಣ ಪ್ರತಿಷ್ಠೆಯಲ್ಲಿ ಅವರು ಭಾಗಿಯಾಗಿರಲಿಲ್ಲ. ರಾಷ್ಟ್ರಪತಿಗಳ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಹನುಮಂತನಗರ, ರೈಲು ನಿಲ್ದಾಣ, ರಾಮಪಥ ಮತ್ತು ನಯಾ ಘಾಟ್ ಸೇರಿದಂತೆ ಇಡೀ ಅಯೋಧ್ಯೆಯಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.