ನವದೆಹಲಿ: ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ಭೀತಿ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಉಭಯ ದೇಶಗಳಿಗೆ ಪ್ರಯಾಣಿಸುವ ಭಾರತೀಯರಿಗೆ ಸಲಹೆಯನ್ನು ಬಿಡುಗಡೆ ಮಾಡಿದೆ. ಎರಡೂ ರಾಷ್ಟ್ರಗಳಿಗೆ ಪ್ರಯಾಣಿಸುವವರು ಜಾಗರೂಕರಾಗಿರಬೇಕು ಮತ್ತು ಭಾರತೀಯ ರಾಯಭಾರಿ ಕಚೇರಿಯೊಂದಿಗೆ ಸಂಪರ್ಕದಲ್ಲಿ ಇರಬೇಕು ಎಂದು ಎಂದಿದೆ.
ಇರಾನ್ ಮತ್ತು ಇಸ್ರೇಲ್ಗೆ ಪ್ರಯಾಣ ಸಲಹೆ ಕುರಿತು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಎಂಇಎ ವಕ್ತಾರ ರಣಧೀರ್ ಜೈಸ್ವಾಲ್, “ನಾವು ಈ ಪ್ರದೇಶದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಇರಾನ್ ಮತ್ತು ಇಸ್ರೇಲ್ ಹಲವಾರು ದಿನಗಳಿಂದ ತಮ್ಮ ವಾಯುಪ್ರದೇಶವನ್ನು ತೆರೆದಿರುವುದನ್ನು ನಾವು ಗಮನಿಸಿದ್ದೇವೆ. ಈ ದೇಶಗಳಿಗೆ ಪ್ರಯಾಣಿಸುವಾಗ ಜಾಗರೂಕರಾಗಿರಲು ಮತ್ತು ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಲು ಭಾರತೀಯ ಪ್ರಜೆಗಳಿಗೆ ಸಲಹೆ ನೀಡಲಾಗಿದೆ” ಎಂದಿದ್ದಾರೆ.
ಇದಕ್ಕೂ ಮೊದಲು ಏಪ್ರಿಲ್ 14 ರಂದು, ಇಸ್ರೇಲ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಇಸ್ರೇಲ್ನಲ್ಲಿರುವ ಭಾರತೀಯ ನಾಗರಿಕರಿಗೆ ಶಾಂತವಾಗಿರಲು ಮತ್ತು ಸ್ಥಳೀಯ ಅಧಿಕಾರಿಗಳು ನೀಡಿದ ಸುರಕ್ಷತಾ ಪ್ರೋಟೋಕಾಲ್ಗಳಿಗೆ ಬದ್ಧವಾಗಿರಲು ಸಲಹೆಯನ್ನು ನೀಡಿದೆ.
ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಮತ್ತು ಇಸ್ರೇಲ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ರಾಯಭಾರ ಕಚೇರಿ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.