ನವದೆಹಲಿ: ಎಎಪಿ ನಾಯಕರ ವಿರುದ್ಧ ತೀವ್ರವಾಗಿ ಹರಿಹಾಯ್ದ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರು, ತಮ್ಮ ವಿರುದ್ಧ ಸುಳ್ಳು ಹಬ್ಬಿಸುತ್ತಿರುವ ಎಎಪಿ ವಿರುದ್ಧ ಮೊಕದ್ದಮೆ ಹೂಡುವುದಾಗಿ ಬೆದರಿಕೆ ಹಾಕಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಬಿಭವ್ ಕುಮಾರ್ ಅವರು ಮುಖ್ಯಮಂತ್ರಿಯವರ ನಿವಾಸದಲ್ಲಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅವರು ಆರೋಪಿಸಿದ ನಂತರ ಈ ಬೆಳವಣಿಗೆ ನಡೆದಿದೆ.
ಅಲ್ಲದೇ ಎಎಪಿ ನನ್ನ ಮೇಲೆ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
“ನನ್ನ ಮೇಲೆ ಹಲ್ಲೆ ನಡೆಸಿದ ಕುಮಾರ್ ವಿರುದ್ಧ ದೂರು ಸಲ್ಲಿಸಿದ ಕೂಡಲೇ ಪಕ್ಷದಲ್ಲಿ ನನ್ನ ಸ್ಥಾನಮಾನ “ಲೇಡಿ ಸಿಂಗಮ್” ನಿಂದ “ಬಿಜೆಪಿ ಏಜೆಂಟ್” ಆಗಿ ಬದಲಾಗಿದೆ” ಎಂದು ಸ್ವಾತಿ ಮಲಿವಾಲ್ ಆರೋಪಿಸಿದ್ದಾರೆ.
“ಅವರ ಪ್ರಕಾರ, ನಾನು ಬಿಭವ್ ಕುಮಾರ್ ವಿರುದ್ಧ ದೂರು ದಾಖಲಿಸುವವರೆಗೂ ‘ಲೇಡಿ ಸಿಂಗಮ್’ ಆಗಿದ್ದೆ ಮತ್ತು ಇಂದು ನಾನು ಬಿಜೆಪಿ ಏಜೆಂಟ್ ಆಗಿದ್ದೇನೆ. ನೀವು ಹರಡಿದ ಪ್ರತಿಯೊಂದು ಸುಳ್ಳಿಗಾಗಿ ನಾನು ನಿಮ್ಮನ್ನು ನ್ಯಾಯಾಲಯಕ್ಕೆ ಕರೆದೊಯ್ಯುತ್ತೇನೆ!” ಎಂದು ಮಲಿವಾಲ್ ಸೋಮವಾರ ತಿಳಿಸಿದ್ದಾರೆ.
ನನ್ನ ವಿರುದ್ಧ ಭ್ರಷ್ಟಾಚಾರದ ಆರೋಪದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ ಮತ್ತು ಬಿಜೆಪಿಯ ಸೂಚನೆ ಮೇರೆಗೆ ನಾನು ಇದೆಲ್ಲವನ್ನೂ ಮಾಡಿದ್ದೇನೆ ಎಂದು ನಿನ್ನೆಯಿಂದ ದೆಹಲಿ ಸಚಿವರು ಸುಳ್ಳುಗಳನ್ನು ಹಬ್ಬಿಸುತ್ತಿದ್ದಾರೆ. ಈ ಎಫ್ಐಆರ್ 8 ವರ್ಷಗಳ ಹಿಂದೆ 2016 ರಲ್ಲಿ ದಾಖಲಾಗಿತ್ತು. ಲೆಫ್ಟಿನೆಂಟ್ ಗವರ್ನರ್ ನನ್ನನ್ನು ಎರಡು ಬಾರಿ ಮಹಿಳಾ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ, ಈ ಪ್ರಕರಣವು ಸಂಪೂರ್ಣವಾಗಿ ನಕಲಿಯಾಗಿದ್ದು, ಯಾವುದೇ ಹಣದ ವ್ಯವಹಾರ ನಡೆದಿಲ್ಲ ಎಂದಿದ್ದಾರೆ.
https://x.com/SwatiJaiHind/status/1792591040643285313?ref_src=twsrc%5Etfw%7Ctwcamp%5Etweetembed%7Ctwterm%5E1792591040643285313%7Ctwgr%5E352bb696b32eb3250adf2402f7d5aa5a365a7af6%7Ctwcon%5Es1_&ref_url=https%3A%2F%2Fwww.newsbharati.com%2FEncyc%2F2024%2F5%2F21%2FSwati-Maliwal-AAP-BJP-agent.html
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.