ನವದೆಹಲಿ: ಲೋಕಸಭೆ ಚುನಾವಣೆಯ ಆರನೇ ಹಂತದ ಮತದಾನ ಇಂದು 58 ಸಂಸದೀಯ ಕ್ಷೇತ್ರಗಳಲ್ಲಿ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಈ ಹಂತದಲ್ಲಿ, ಬಿಹಾರದ ಎಂಟು ಲೋಕಸಭಾ ಸ್ಥಾನಗಳು, ಹರಿಯಾಣದ ಎಲ್ಲಾ ಹತ್ತು ಸ್ಥಾನಗಳು, ಜಾರ್ಖಂಡ್ನಲ್ಲಿ ನಾಲ್ಕು ಸ್ಥಾನಗಳು, ದೆಹಲಿಯ ಎಲ್ಲಾ ಏಳು ಸ್ಥಾನಗಳು, ಒಡಿಶಾದಲ್ಲಿ ಆರು ಸ್ಥಾನಗಳು, ಉತ್ತರ ಪ್ರದೇಶದಲ್ಲಿ 14 ಸ್ಥಾನಗಳು, ಪಶ್ಚಿಮ ಬಂಗಾಳದಲ್ಲಿ ಎಂಟು ಸ್ಥಾನಗಳು ಮತ್ತು ಜಮ್ಮುವಿನ ಒಂದು ಸಂಸದೀಯ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ.
ಒಡಿಶಾ ರಾಜ್ಯ ವಿಧಾನಸಭೆಗೆ 42 ವಿಧಾನಸಭಾ ಕ್ಷೇತ್ರಗಳಿಗೆ ಮತದಾನವೂ ಏಕಕಾಲದಲ್ಲಿ ನಡೆಯುತ್ತಿದೆ.
ಬಿಜೆಪಿಯ ಹಿರಿಯ ನಾಯಕರಾದ ಧರ್ಮೇಂದ್ರ ಪ್ರಧಾನ್, ಮೇನಕಾ ಗಾಂಧಿ, ಮನೋಹರ್ ಲಾಲ್ ಖಟ್ಟರ್, ಸಂಬಿತ್ ಪಾತ್ರ, ಬನ್ಸುರಿ ಸ್ವರಾಜ್ ಮತ್ತು ಮನೋಜ್ ತಿವಾರಿ ಮತ್ತು ಕಾಂಗ್ರೆಸ್ ನಾಯಕರಾದ ದೀಪೇಂದರ್ ಸಿಂಗ್ ಹೂಡಾ, ಕುಮಾರಿ ಸೆಲ್ಜಾ, ರಾಜ್ ಬಬ್ಬರ್ ಮತ್ತು ಕನ್ಹಯ್ಯಾ ಕುಮಾರ್ ಹಾಗೂ ಸಮಾಜವಾದಿ ಪಕ್ಷದ ನಾಯಕ ಧರ್ಮೇಂದ್ರ ಯಾದವ್, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಸೇರಿದಂತೆ ಪ್ರಮುಖ ನಾಯಕರ ರಾಜಕೀಯ ಭವಿಷ್ಯ ಇವಿಎಂನಲ್ಲಿ ಇಂದು ಭದ್ರವಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.