ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಅವರು ದೆಹಲಿಯ ಮತಗಟ್ಟೆಯಲ್ಲಿ ಇಂದು ಮತ ಚಲಾಯಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ವೇಳೆ ಅವರು, ಮತದಾನದ ಪ್ರಮಾಣ, ಚುನಾವಣಾ ಪ್ರಕ್ರಿಯೆಗಳ ಸುತ್ತಲಿನ ಅನುಮಾನಗಳನ್ನು ಹೋಗಲಾಡಿಸುವ ಅಗತ್ಯವನ್ನು ಒತ್ತಿ ಹೇಳಿದರು.
“ಮತದಾನದ ಪ್ರಮಾಣದ ಅಂಕಿಅಂಶ ಬಿಡುಗಡೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಸತ್ಯವನ್ನು ಒಪ್ಪಿಕೊಂಡಿದೆ. ಮತದಾನ ಪ್ರಮಾಣದ ಬಗ್ಗೆ ಅನುಮಾನದ ವಾತಾವರಣವನ್ನು ಸೃಷ್ಟಿಸುವ ಪ್ರಯತ್ನವನ್ನು ಮಾಡಲಾಗಿದೆ. ನಾವು ಈ ಬಗ್ಗೆ ಒಂದು ದಿನ ಖಚಿತವಾಗಿ ಎಲ್ಲರೊಂದಿಗೆ ಚರ್ಚಿಸುತ್ತೇವೆ” ಎಂದು ಕುಮಾರ್ ಹೇಳಿದರು.
ಚುನಾವಣಾ ಪ್ರಕ್ರಿಯೆಯ ಸಮಗ್ರತೆಯ ಬಗ್ಗೆ ಕಳವಳವನ್ನು ಪರಿಹರಿಸಲು ಬದ್ಧರಾಗಿದ್ದೇವೆ ಎಂದ ಅವರು, “ಇಲ್ಲಿ ಯಾಕೆ ಅನುಮಾನಗಳನ್ನು ಸೃಷ್ಟಿಸಲಾಗಿದೆ ಮತ್ತು ಯಕೆ ಅನುಮಾನಗಳನ್ನು ಹುಟ್ಟುಹಾಕಲಾಗಿದೆ, ನಾವು ಈ ಎಲ್ಲವನ್ನು ಒಂದು ದಿನ ಬಹಿರಂಗಪಡಿಸುತ್ತೇವೆ ಮತ್ತು ಜನರನ್ನು ಹೇಗೆ ದಾರಿ ತಪ್ಪಿಸಲಾಗುತ್ತಿದೆ ಎಂದು ಎಲ್ಲರಿಗೂ ತೋರಿಸುತ್ತೇವೆ. ಇವಿಎಂಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲವೋ, ಮತದಾನದ ಪಟ್ಟಿ ತಪ್ಪಾಗಿದೆಯೋ ಅಥವಾ ಮತದಾನದ ಸಂಖ್ಯೆಗಳನ್ನು ತಿರುಚಲಾಗಿದೆಯೋ ಎಂಬ ಪ್ರಶ್ನೆಗಳು ಜನರ ಮನಸ್ಸಿನಲ್ಲಿ ಮೂಡುತ್ತಿವೆ, ಇದಕ್ಕೆ ಸುಪ್ರೀಂಕೋರ್ಟ್ ನಿನ್ನೆ ಉತ್ತರವನ್ನು ನೀಡಿದೆ, ನಾವು ಕೂಡ ಖಂಡಿತವಾಗಿಯೂ ಉತ್ತರವನ್ನು ನೀಡುತ್ತೇವೆ” ಎಂದಿದ್ದಾರೆ.
ಭಾರತೀಯ ಚುನಾವಣಾ ಆಯೋಗದ ವೆಬ್ಸೈಟ್ನಲ್ಲಿ ನಮೂನೆ 17ಸಿ ಡೇಟಾವನ್ನು ಅಪ್ಲೋಡ್ ಮಾಡಲು ಮತ್ತು ಬೂತ್ವಾರು ಮತದಾರರ ದತ್ತಾಂಶವನ್ನು ಪ್ರಕಟಿಸಲು ಕೋರಿ ಸಲ್ಲಿಸಲಾದ ಮನವಿಯ ಮೇಲೆ ಯಾವುದೇ ನಿರ್ದೇಶನ ನೀಡಲು ಸುಪ್ರೀಂಕೋರ್ಟ್ ಶುಕ್ರವಾರ ನಿರಾಕರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.