News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

370 ನೇ ವಿಧಿ ಕೇವಲ ನಾಲ್ಕೈದು ಕುಟುಂಬಗಳ ಅಜೆಂಡಾ ಆಗಿತ್ತು: ಮೋದಿ

ನವದೆಹಲಿ: 370ನೇ ವಿಧಿಯು ಕಾಶ್ಮೀರದ ಜನರ ಅಥವಾ ದೇಶದ ಜನರ ಅಜೆಂಡಾ ಆಗಿರಲಿಲ್ಲ, ಅದು ಕೇವಲ ನಾಲ್ಕೈದು ಕುಟುಂಬಗಳ ಅಜೆಂಡಾ ಆಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

370 ನೇ ವಿಧಿ ರದ್ಧತಿ ಕಾಶ್ಮೀರಿ ಜನತೆಗೆ ಸಂತೋಷವನ್ನು ನೀಡಿದೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಅತ್ಯಂತ ಉತ್ಸಾಹದಿಂದ ಮತ ಚಲಾಯಿಸಲಿದ್ದಾರೆ ಎಂದಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ತೆಗೆದುಹಾಕಿದ ಬಳಿಕ ಒಗ್ಗಟ್ಟಿನ ಭಾವನೆ ಇದೆ. ಈ ಭಾವನೆಯು ಮತದಾನ ಪ್ರಮಾಣ ಹೆಚ್ಚಳದಲ್ಲಿ ಮತ್ತು ಪ್ರವಾಸೋದ್ಯಮದಲ್ಲಿ ಗೋಚರಿಸುತ್ತಿದೆ ಎಂದಿದ್ದಾರೆ.

ಆರ್ಟಿಕಲ್ 370 ಕೇವಲ ನಾಲ್ಕೈದು ಕುಟುಂಬಗಳ ಅಜೆಂಡಾ, ಇದು ಕಾಶ್ಮೀರದ ಜನರ ಅಥವಾ ದೇಶದ ಜನರ ಅಜೆಂಡಾ ಅಲ್ಲ. ಕೆಲ ಕುಟುಂಬಗಳು ಅನುಕೂಲಕ್ಕಾಗಿ, ಅವರು 370 ರ ಗೋಡೆಯನ್ನು ನಿರ್ಮಿಸಿದ್ದರು ಮತ್ತು 370 ತೆಗೆದರೆ ಬೆಂಕಿ ಬೀಳುತ್ತದೆ ಎಂದು ಹೇಳುತ್ತಿದ್ದರು. ಇಂದು 370 ತೆಗೆದ ನಂತರ ಕಾಶ್ಮೀರದ ಜನರಲ್ಲಿ ಒಗ್ಗಟ್ಟಿನ ಭಾವನೆ ಹೆಚ್ಚುತ್ತಿದೆ ಎಂದಿದ್ದಾರೆ.

G20 ಶೃಂಗಸಭೆಗೆ ಸಂಬಂಧಿಸಿದ ಕಾರ್ಯಕ್ರಮಗಳ ಸಂದರ್ಭದಲ್ಲಿ ಕಾಶ್ಮೀರದ ಜನರು ಪ್ರತಿನಿಧಿಗಳನ್ನು ಆತ್ಮೀಯವಾಗಿ ಸ್ವಾಗತಿಸಿದರು ಎಂದು ಪ್ರಧಾನಿ ಗಮನಿಸಿದರು.

ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದಲ್ಲಿರುವ ಶ್ರೀನಗರ, ಬಾರಾಮುಲ್ಲಾ ಮತ್ತು ಅನಂತನಾಗ್-ರಜೌರಿ ಲೋಕಸಭಾ ಕ್ಷೇತ್ರಗಳಲ್ಲಿ ಈ ತಿಂಗಳ ಆರಂಭದಲ್ಲಿ ವಿವಿಧ ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ದಾಖಲೆಯ ಮತದಾನವಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top