News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪದವೀಧರ ಕ್ಷೇತ್ರದ ಮತದಾನದ ಲೈವ್ ವೆಬ್‍ಕಾಸ್ಟಿಂಗ್ ಮಾಡುವಂತೆ ಬಿಜೆಪಿ ನಿಯೋಗ ಮನವಿ

ಬೆಂಗಳೂರು: ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಯು ಜೂನ್ 3ರಂದು ನಡೆಯಲಿದೆ. ಕನಕಪುರ, ಹೊಸಕೋಟೆ, ಆನೇಕಲ್, ದೇವನಹಳ್ಳಿ, ಬಿ.ಟಿಎಂ. ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನದ ಲೈವ್ ವೆಬ್‍ಕಾಸ್ಟಿಂಗ್ ವ್ಯವಸ್ಥೆ ಮಾಡುವಂತೆ ಬಿಜೆಪಿ ನಿಯೋಗವು ಮನವಿ ಸಲ್ಲಿಸಿದೆ.

ಇಂದು ಶೇಷಾದ್ರಿ ರಸ್ತೆಯಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ ಭೇಟಿ ನೀಡಿ ಈ ಮನವಿ ಸಲ್ಲಿಸಲಾಯಿತು.

ಬಿಜೆಪಿ ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ವಸಂತಕುಮಾರ್, ಹಿರಿಯ ಮುಖಂಡರಾದ ದತ್ತಗುರು ಹೆಗ್ಡೆ, ಪ್ರಕೋಷ್ಠದ ಸದಸ್ಯ ಯಶವಂತ್, ವೀಣಾ ಅರುಣ್, ಕೆ.ಪಿ.ವಿಶ್ವನಾಥ, ಬೆಂಗಳೂರು ಉತ್ತರ ಜಿಲ್ಲಾ ಸಂಚಾಲಕ ಶಿವಾನಂದ ಅವರು ಈ ಮನವಿಗೆ ಸಹಿ ಹಾಕಿದ್ದಾರೆ.

ಮನವಿಯಲ್ಲಿ ತಿಳಿಸಿದ ವಿಧಾನಸಭಾ ಕ್ಷೇತ್ರಗಳು ಅತಿ ಸೂಕ್ಷ್ಮ ಮತಗಟ್ಟೆಗಳನ್ನು ಒಳಗೊಂಡಿವೆ. ಮತದಾನ ಸುಗಮವಾಗಿ ಮತ್ತು ಶಾಂತಿಯುತವಾಗಿ ನಡೆಯುವ ದೃಷ್ಟಿಯಿಂದ ಮೇಲಿನ ಕ್ಷೇತ್ರಗಳಲ್ಲಿ ಮತದಾನದ ದಿನದಂದು ಲೈವ್ ವೆಬ್‍ಕಾಸ್ಟಿಂಗ್ ವ್ಯವಸ್ಥೆ ಮಾಡುವಂತೆ ಕೋರಲಾಯಿತು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top