News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಒಡಿಶಾ ಸಿಎಂ ಕುಸಿಯುತ್ತಿರುವ ಆರೋಗ್ಯದ ಹಿಂದೆ ಪಿತೂರಿ ಇರುವ ಶಂಕೆ ವ್ಯಕ್ತಪಡಿಸಿದ ಮೋದಿ

ಭುವನೇಶ್ವರ: ಒಡಿಶಾದಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಆರೋಗ್ಯದ ವಿಷಯವನ್ನು ಪ್ರಸ್ತಾಪಿಸಿದರು.

ಒಡಿಶಾದಲ್ಲಿ ಬಿಜೆಪಿ ಸರ್ಕಾರ ರಚಿಸಿದರೆ, ನವೀನ್ ಪಟ್ನಾಯಕ್ ಅವರ ಆರೋಗ್ಯ ಸ್ಥಿತಿ ಹಠಾತ್ ಹದಗೆಟ್ಟಿರುವ ಹಿಂದಿನ ಕಾರಣವನ್ನು ಕಂಡುಹಿಡಿಯಲು ಸಮಿತಿಯನ್ನು ರಚಿಸುವುದಾಗಿ ಮೋದಿ ಭರವಸೆ ನೀಡಿದರು.

“ಇತ್ತೀಚಿನ ದಿನಗಳಲ್ಲಿ ನವೀನ್ ಪಟ್ನಾಯಕ್ ಅವರ ಹಿತೈಷಿಗಳೆಲ್ಲರೂ ತುಂಬಾ ಚಿಂತಿತರಾಗಿದ್ದಾರೆ. ಕಳೆದ ವರ್ಷದಲ್ಲಿ ನವೀನ್ ಬಾಬು ಅವರ ಆರೋಗ್ಯವು ಹೇಗೆ ಹದಗೆಟ್ಟಿದೆ ಎಂಬುದನ್ನು ನೋಡಿ ಅವರು ತುಂಬಾ ತೊಂದರೆಗೀಡಾಗಿದ್ದಾರೆ” ಎಂದು ಒಡಿಶಾದ ಬರಿಪಾಡಾದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮೋದಿ ಹೇಳಿದರು.

“ವರ್ಷಗಳಿಂದ ನವೀನ್ ಬಾಬು ಹತ್ತಿರ ಇರುವವರು ನನ್ನನ್ನು ಭೇಟಿಯಾದಾಗಲೂ ಅವರ ಆರೋಗ್ಯದ ಬಗ್ಗೆಯೇ ಮಾತನಾಡುತ್ತಾರೆ, ನವೀನ್ ಬಾಬು ಈಗ ಸ್ವಂತವಾಗಿ ಏನನ್ನೂ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳುತ್ತಾರೆ. ಅವರ ಆರೋಗ್ಯ ಹದಗೆಡುತ್ತಿರುವುದರ ಹಿಂದೆ ಪಿತೂರಿ ಇರಬಹುದು” ಎಂದು ಅವರು ಹೇಳಿದರು.

“ನವೀನ್ ಪಟ್ನಾಯಕ್ ಹೆಸರಿನಲ್ಲಿ ಒಡಿಶಾದಲ್ಲಿ ಅಧಿಕಾರ ಅನುಭವಿಸುತ್ತಿರುವ ಲಾಬಿಯ ಕೈವಾಡವಿದೆಯೇ? ಈ ನಿಗೂಢವನ್ನು ಬಯಲಿಗೆಳೆಯುವುದು ಅಗತ್ಯವಾಗಿದೆ” ಎಂದರು.

https://x.com/BJP4India/status/1795735771300696350?ref_src=twsrc%5Etfw%7Ctwcamp%5Etweetembed%7Ctwterm%5E1795737512192675853%7Ctwgr%5E78c7e8641cfd1741b7e9e79cc1c7149b79611a7b%7Ctwcon%5Es2_&ref_url=https%3A%2F%2Fwww.hindustantimes.com%2Findia-news%2Fnarendra-modi-naveen-patnaik-health-bjd-v-k-pandian-lok-sabha-elections-101716972855744.html%3Futm_source%3Dmicrosoft-ht

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top