News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಇಂಡಿ ಒಕ್ಕೂಟ ಭ್ರಷ್ಟರ ಮೈತ್ರಿಯೇ ಹೊರತು ಬೇರೇನೂ ಅಲ್ಲ: ಜೆಪಿ ನಡ್ಡಾ

ನವದೆಹಲಿ: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ‘ಇಂಡಿ ಅಲಯನ್ಸ್’ ಭ್ರಷ್ಟ ನಾಯಕರ ಮೈತ್ರಿಯೇ ಹೊರತು ಬೇರೇನೂ ಅಲ್ಲ, ಅದರ ಎಲ್ಲಾ ನಾಯಕರು ಮತ್ತು ಮಿತ್ರ ಪಕ್ಷಗಳು ಭ್ರಷ್ಟರು ಮತ್ತು ವಿವಿಧ ಹಗರಣಗಳಲ್ಲಿ ಭಾಗಿಯಾದವರು ಎಂದಿದ್ದಾರೆ.

ದುಮ್ಕಾದ ಸಾರತ್‌ನಲ್ಲಿ ಚುನಾವಣಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪಿ. ಚಿದಂಬರಂ, ಕಾರ್ತಿ ಚಿದಂಬರಂ, ಅರವಿಂದ್ ಕೇಜ್ರಿವಾಲ್ ಮತ್ತು ಲಾಲು ಯಾದವ್ ಸೇರಿದಂತೆ ಹಲವಾರು ಪ್ರಮುಖ ಇಂಡಿ ಮೈತ್ರಿಕೂಟದ ನಾಯಕರು ಜಾಮೀನಿನ ಮೇಲೆ ಹೊರಗಿದ್ದರೆ, ಮನೀಷ್ ಸಿಸೋಡಿಯಾ, ಸತ್ಯೇಂದ್ರ ಜೈನ್, ಅಜಂ ಖಾನ್, ಟಿಎಂಸಿ ಮತ್ತು ಡಿಎಂಕೆ ನಾಯಕರು ಸದ್ಯ ಜೈಲಿನಲ್ಲಿದ್ದಾರೆ. ಇಂಡಿ ಕೂಟದ ಅರ್ಧದಷ್ಟು ನಾಯಕರು ಜೈಲಿನಲ್ಲಿದ್ದರೆ, ಉಳಿದ ಅರ್ಧದಷ್ಟು ಜನರು ಜಾಮೀನಿನ ಮೇಲೆ ಹೊರಗಿದ್ದಾರೆೆ ಎಂದಿದ್ದಾರೆ.

ಜಾರ್ಖಂಡ್ ಮಾಫಿಯಾ ಹಿಡಿತದಲ್ಲಿದೆ ಮತ್ತು ಬಡ ಜನರ ಹಣವನ್ನು ಲೂಟಿ ಮಾಡಲಾಗಿದೆ ಮತ್ತು ಅವರು ಸರ್ಕಾರದ ಕಲ್ಯಾಣ ಯೋಜನೆಗಳಿಂದ ವಂಚಿತರಾಗಿದ್ದಾರೆ ಎಂದು ನಡ್ಡಾ ಹೇಳಿದರು. ದೇಶದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ವೇಗಗೊಳಿಸಲು ಬಿಜೆಪಿಗೆ ಮತ ಚಲಾಯಿಸುವಂತೆ ಅವರು ಜನರನ್ನು ಪ್ರೇರೇಪಿಸಿದರು.

ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಕಾಂಗ್ರೆಸ್ ಬಯಸುತ್ತದೆ. ಬಿ.ಆರ್.ಅಂಬೇಡ್ಕರ್ ಅವರು ಒಂದು ಸ್ಥಳದ ಭೌಗೋಳಿಕ ಮತ್ತು ಸಾಮಾಜಿಕ ಪರಿಸ್ಥಿತಿಗಳ ಆಧಾರದ ಮೇಲೆ ಮೀಸಲಾತಿಯನ್ನು ಪ್ರತಿಪಾದಿಸಿದ್ದಾರೆಯೇ ಹೊರತು ಧಾರ್ಮಿಕ ಆಧಾರದ ಮೇಲೆ ಅಲ್ಲ ಎಂದಿದ್ದಾರೆ.

ಜಾರ್ಖಂಡ್‌ನ ದುಮ್ಕಾ ರಾಜಮಹಲ್ ಮತ್ತು ಗೊಡ್ಡಾ ಮೂರು ಸ್ಥಾನಗಳಿಗೆ ಲೋಕಸಭೆ ಚುನಾವಣೆ ಏಳನೇ ಮತ್ತು ಅಂತಿಮ ಹಂತದಲ್ಲಿ ಜೂನ್ 1 ರಂದು ನಡೆಯಲಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top