ನವದೆಹಲಿ: 2024 ರ ಲೋಕಸಭಾ ಚುನಾವಣೆಯ ನಂತರ ಪ್ರಜಾಪ್ರಭುತ್ವದ ಶಕ್ತಿಯು ಇವಿಎಂ ವಿರುದ್ಧ ಆರೋಪ ಮಾಡುತ್ತಿದ್ದವರನ್ನು ಮೌನಗೊಳಿಸಿತು ಎನ್ನುವ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ವಿದ್ಯುನ್ಮಾನ ಮತಯಂತ್ರಗಳ (ಇವಿಎಂಗಳ) ವಿಶ್ವಾಸಾರ್ಹತೆಯ ಬಗ್ಗೆ ಆರೋಪ ಮಾಡುತ್ತಿದ್ದ ಇಂಡಿ ಒಕ್ಕೂಟವನ್ನು ತರಾಟೆಗೆ ತೆಗೆದುಕೊಂಡರು.
ನರೇಂದ್ರ ಮೋದಿ ಅವರನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಿದ ಎನ್ಡಿಎ ಸಂಸದರ ಸಭೆಯನ್ನುದ್ದೇಶಿಸಿ ಮಾತನಾಡಿದ ನರೇಂದ್ರ ಮೋದಿ, “ಇವಿಎಂಗಳು ಮತ್ತು ಆಧಾರ್ನಂತಹ ತಾಂತ್ರಿಕ ಪ್ರಗತಿಯನ್ನು ಪ್ರಶ್ನಿಸುವ ಇಂಡಿಯಾ ಬ್ಲಾಕ್ನ ಜನರು ಹಿಂದಿನ ಶತಮಾನಕ್ಕೆ ಸೇರಿದವರು ಎಂದು ನಾನು ಬಲವಾಗಿ ಭಾವಿಸುತ್ತೇನೆ” ಎಂದು ಹೇಳಿದರು.
“ಇದು ಭಾರತದ ಪ್ರಜಾಪ್ರಭುತ್ವದ ಶಕ್ತಿಯಾಗಿದೆ, ಇವಿಎಂಗಳು ಮತ್ತು ಚುನಾವಣಾ ಆಯೋಗವನ್ನು ಪ್ರಶ್ನಿಸುವವರನ್ನು ಫಲಿತಾಂಶದ ನಂತರ ಮೌನಗೊಳಿಸಲಾಯಿತು” ಎಂದು ಅವರು ಹೇಳಿದರು.
ಎನ್ಡಿಎ ಅಧಿಕಾರಕ್ಕಾಗಿ ಒಗ್ಗೂಡಿರುವ ಪಕ್ಷಗಳ ಗುಂಪಲ್ಲ, ಅದು ಮೊದಲು ರಾಷ್ಟ್ರ ಎಂಬ ಧ್ಯೇಯದೊಂದಿಗೆ ಕೆಲಸ ಮಾಡಲು ಬದ್ಧವಾಗಿರುವ ಮೈತ್ರಿಯಾಗಿದೆ. ಭಾರತದ ಇತಿಹಾಸದಲ್ಲಿ ಎನ್ಡಿಎ ಅತ್ಯಂತ ಯಶಸ್ವಿ ಮೈತ್ರಿಯಾಗಿದ್ದು, ಎಲ್ಲಾ ನಿರ್ಧಾರಗಳಲ್ಲಿ ಒಮ್ಮತವನ್ನು ಸಾಧಿಸುವುದು ನಮ್ಮ ಗುರಿಯಾಗಿದೆ ಎಂದು ಅವರು ಹೇಳಿದರು.
ಇಂದು 22 ರಾಜ್ಯಗಳಲ್ಲಿ ಸರ್ಕಾರ ರಚಿಸುವ ಮೂಲಕ ದೇಶದ ಜನರು ಎನ್ಡಿಎಗೆ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಾರೆ ಎಂದು ಮೋದಿ ಹೇಳಿದರು.
ಎನ್ಡಿಎ ಸರ್ಕಾರವು ಉತ್ತಮ ಆಡಳಿತ, ಅಭಿವೃದ್ಧಿ ಮತ್ತು ಸಾಮಾನ್ಯ ನಾಗರಿಕರ ಜೀವನದಲ್ಲಿ ಕನಿಷ್ಠ ಹಸ್ತಕ್ಷೇಪದ ಮೇಲೆ ಕೇಂದ್ರೀಕರಿಸುತ್ತದೆ. ಕಳೆದ ಹತ್ತು ವರ್ಷಗಳಲ್ಲಿ ದೇಶವನ್ನು ಯಶಸ್ಸಿನ ಹೊಸ ಉತ್ತುಂಗಕ್ಕೆ ಕೊಂಡೊಯ್ಯಲು ಎನ್ಡಿಎ ಕೆಲಸ ಮಾಡಿದೆ. ಎನ್ಡಿಎಯ ಎಲ್ಲಾ ನಾಯಕತ್ವದ ಆಧಾರ ಸ್ತಂಭಗಳ ನಡುವೆ ಇರುವ ಸಾಮಾನ್ಯ ವಿಷಯವೆಂದರೆ ಉತ್ತಮ ಆಡಳಿತ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.