ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24 ರಂದು ಹೊಸದಾಗಿ ಚುನಾಯಿತ ಸದಸ್ಯರ ಪ್ರಮಾಣ ವಚನ ಅಥವಾ ದೃಢೀಕರಣಕ್ಕಾಗಿ ಆರಂಭವಾಗಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಬುಧವಾರ ತಿಳಿಸಿದ್ದಾರೆ.
ಅಧಿವೇಶನದ ಮೊದಲ ಮೂರು ದಿನಗಳಲ್ಲಿ ಹೊಸದಾಗಿ ಆಯ್ಕೆಯಾದ ನಾಯಕರು ಪ್ರಮಾಣ ವಚನ ಸ್ವೀಕರಿಸುತ್ತಾರೆ ಅಥವಾ ಲೋಕಸಭೆಯ ಸದಸ್ಯತ್ವದ ದೃಢೀಕರಣವನ್ನು ಮಾಡುತ್ತಾರೆ ಮತ್ತು ಸದನದ ಸ್ಪೀಕರ್ ಅನ್ನು ಆಯ್ಕೆ ಮಾಡುತ್ತಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜೂನ್ 27 ರಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ಮುಂದಿನ ಐದು ವರ್ಷಗಳ ಹೊಸ ಸರ್ಕಾರದ ಮಾರ್ಗಸೂಚಿಯನ್ನು ರೂಪಿಸುವ ಸಾಧ್ಯತೆಯಿದೆ.
ರಾಜ್ಯಸಭೆಯ 264ನೇ ಅಧಿವೇಶನ ಕೂಡ ಜೂನ್ 27 ರಂದು ಆರಂಭವಾಗಿ ಜುಲೈ 3 ರಂದು ಮುಕ್ತಾಯವಾಗಲಿದೆ. ಜೂನ್ 27 ರಂದು ರಾಷ್ಟ್ರಪತಿಗಳ ಭಾಷಣದ ನಂತರ ಪ್ರಧಾನಿ ಮೋದಿ ಅವರು ಸಂಸತ್ತಿಗೆ ತಮ್ಮ ಮಂತ್ರಿಮಂಡಲವನ್ನು ಪರಿಚಯಿಸುವ ನಿರೀಕ್ಷೆಯಿದೆ.
ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಯ ವೇಳೆ ವಿವಿಧ ವಿಷಯಗಳಲ್ಲಿ ಎನ್ಡಿಎ ಸರ್ಕಾರವನ್ನು ಪ್ರತಿಪಕ್ಷಗಳು ತರಾಟೆಗೆ ತೆಗೆದುಕೊಳ್ಳುವ ನಿರೀಕ್ಷಿ ಇದೆ. ಸಂಸತ್ತಿನ ಉಭಯ ಸದನಗಳಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಿ ಉತ್ತರ ನೀಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.