ಇಟಾನಗರ: ಅರುಣಾಚಲ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದ ವಾರಗಳ ನಂತರ ಪೆಮಾ ಖಂಡು ಇಂದು ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರ ಸಂಪುಟದ ಹನ್ನೊಂದು ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು.
ಇಟಾನಗರದಲ್ಲಿ ನಡೆದ ಸಮಾರಂಭದಲ್ಲಿ ಅರುಣಾಚಲ ಪ್ರದೇಶದ ರಾಜ್ಯಪಾಲ ಕೆಟಿ ಪರ್ನಾಯಕ್ ಅವರು ಖಂಡು ಮತ್ತು ಇತರ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಚಿವರಾದ ಜೆಪಿ ನಡ್ಡಾ ಮತ್ತು ಕಿರಣ್ ರಿಜಿಜು ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹೊಸ ಅರುಣಾಚಲ ಸಂಪುಟದಲ್ಲಿ ಚೌನಾ ಮೇ ಉಪಮುಖ್ಯಮಂತ್ರಿಯಾಗಲಿದ್ದಾರೆ. ಇತರ ಸದಸ್ಯರಾದ ಬಿಯುರಾಮ್ ವಾಘಾ, ನ್ಯಾಟೊ ಡುಕಾಮ್, ಗ್ಯಾನ್ರಿಯಲ್ ಡೆನ್ವಾಂಗ್ ವಾಂಗ್ಸು, ವಾಂಕಿ ಲೋವಾಂಗ್, ಪಸಾಂಗ್ ಡೋರ್ಜಿ ಸೋನಾ, ಮಾಮಾ ನಟುಂಗ್, ದಸಾಂಗ್ಲು ಪುಲ್, ಬಾಲೋ ರಾಜಾ, ಕೆಂಟೋ ಜಿನಿ ಮತ್ತು ಓಜಿಂಗ್ ಟೇಸಿಂಗ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಸಾರ್ವತ್ರಿಕ ಚುನಾವಣೆಯ ಜೊತೆಗೆ ನಡೆದ ರಾಜ್ಯ ಚುನಾವಣೆಯಲ್ಲಿ ಅರುಣಾಚಲ ವಿಧಾನಸಭೆಯ 60 ಸ್ಥಾನಗಳಲ್ಲಿ ಬಿಜೆಪಿ 46 ಸ್ಥಾನಗಳನ್ನು ಗೆದ್ದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.