ನವದೆಹಲಿ: ಸತತ ಎರಡನೇ ಅವಧಿಗೆ ರಕ್ಷಣಾ ಸಚಿವರಾಗಿ ಇಂದು ರಾಜನಾಥ್ ಸಿಂಗ್ ಅವರು ಅಧಿಕಾರ ವಹಿಸಿಕೊಂಡರು. ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾನ್, ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ, ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ತ್ರಿಪಾಠಿ, ರಕ್ಷಣಾ ಕಾರ್ಯದರ್ಶಿ ಗಿರಿಧರ್ ಅರಮನೆ, ಕಾರ್ಯದರ್ಶಿ (ಮಾಜಿ ಸೈನಿಕರ ಕಲ್ಯಾಣ) ಡಾ ನಿತೇನ್ ಚಂದ್ರ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜನಾಥ್ ಸಿಂಗ್, ಮುಂದಿನ ಐದು ವರ್ಷಗಳಿಗಾಗಿನ ತಮ್ಮ ದೃಷ್ಟಿಕೋನವನ್ನು ವಿವರಿಸಿದರು ಮತ್ತು ಹೆಚ್ಚು ಸುರಕ್ಷಿತ, ಸ್ವಾವಲಂಬಿ ಮತ್ತು ಸಮೃದ್ಧ ರಾಷ್ಟ್ರವನ್ನು ಸ್ಥಾಪಿಸಲು ಆದ್ಯತೆಯ ಕ್ಷೇತ್ರಗಳನ್ನು ಮುಂದಕ್ಕೆ ಕೊಂಡೊಯ್ಯಲು ಗಮನಹರಿಸಲಾಗುವುದು ಎಂದು ಹೇಳಿದರು.
“ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ, ರಕ್ಷಣಾ ಉತ್ಪಾದನೆಯಲ್ಲಿ ಸ್ವಾವಲಂಬನೆಯನ್ನು ಸಾಧಿಸುವತ್ತ ಗಮನಹರಿಸುವುದರೊಂದಿಗೆ ದೇಶದ ಭದ್ರತಾ ಸಾಧನವನ್ನು ಮತ್ತಷ್ಟು ಬಲಪಡಿಸುವುದು ನಮ್ಮ ಗುರಿಯಾಗಿದೆ. ಸಶಸ್ತ್ರ ಪಡೆಗಳ ಆಧುನೀಕರಣ ಮತ್ತು ಸೇವೆ ಸಲ್ಲಿಸುತ್ತಿರುವ ಮತ್ತು ನಿವೃತ್ತಿ ಹೊಂದಿದ ಸೈನಿಕರ ಕಲ್ಯಾಣವು ನಮ್ಮ ಮುಖ್ಯ ಗಮನವಾಗಿ ಮುಂದುವರಿಯುತ್ತದೆ” ಎಂದು ಅವರು ಹೇಳಿದರು.
ಮುಂಬರುವ ದಿನಗಳಲ್ಲಿ ರಕ್ಷಣಾ ರಫ್ತುಗಳನ್ನು ಹೆಚ್ಚಿಸುವುದು ನಮ್ಮ ಗುರಿ. 2023-24ರ ಹಣಕಾಸು ವರ್ಷದಲ್ಲಿ ರಕ್ಷಣಾ ರಫ್ತು ದಾಖಲೆಯ 21,083 ಕೋಟಿ ರೂ ತಲುಪಿದೆ. ಇದು ಐತಿಹಾಸಿಕವಾಗಿತ್ತು. 2028-2029ರ ವೇಳೆಗೆ 50,000 ಕೋಟಿ ರೂ.ಗಳ ರಕ್ಷಣಾ ಸಾಧನಗಳನ್ನು ರಫ್ತು ಮಾಡುವುದು ನಮ್ಮ ಗುರಿಯಾಗಿದೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.