ನವದೆಹಲಿ: “ಮಾಹಿತಿಯೇ ಶಕ್ತಿಯಾಗಿದ್ದು, ನಕಲಿ ಸುದ್ದಿಗಳು ಊಹಿಸಲಾಗದಷ್ಟು ವಿಪತ್ತನ್ನು ಸೃಷ್ಟಿಸುತ್ತವೆ” ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಖರ್ ಅವರು ತಿಳಿಸಿದ್ದಾರೆ.
ಮಂಗಳವಾರ ನವದೆಹಲಿಯಲ್ಲಿ ಭಾರತೀಯ ಮಾಹಿತಿ ಸೇವೆಯ (ಐಐಎಸ್) 2022 ಮತ್ತು 2023 ಬ್ಯಾಚ್ಗಳ ಅಧಿಕಾರಿ ತರಬೇತಿದಾರರನ್ನು ಉದ್ದೇಶಿಸಿ ಮಾತನಾಡಿದ ಧಂಖರ್, “ಸಂವಹನಕಾರರಾಗಿ ಐಐಎಸ್ ಅಧಿಕಾರಿಗಳು ಸಾರ್ವಜನಿಕ ನಂಬಿಕೆಯ ಪಾಲಕರು” ಎಂದು ಹೇಳಿದರು.
ನಾಗರಿಕರು ಮತ್ತು ಅವರ ಚುನಾಯಿತ ಸರ್ಕಾರಗಳ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸಲು ಐಐಎಸ್ ಅಧಿಕಾರಿಗಳು ಸಜ್ಜುಗೊಂಡಿದ್ದಾರೆ ಎಂದು ಅವರು ಒತ್ತಿ ಹೇಳಿದರು.
ಅತ್ಯುನ್ನತ ಮಟ್ಟದ ವಿಶ್ವಾಸಾರ್ಹತೆ ಮತ್ತು ಪಾವಿತ್ರ್ಯವನ್ನು ಹೊಂದಿರುವ ಅಧಿಕೃತ ಮಾಹಿತಿ ಮಾತ್ರ ಜನರಿಗೆ ತಲುಪುದನ್ನು ಖಚಿತಪಡಿಸಿಕೊಳ್ಳಲು ಅವರು ಹೊಸ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅಲ್ಲದೇ ಕಲಬೆರಕೆ ಇಲ್ಲದೆ ಮಾಹಿತಿ ಲಭ್ಯವಾಗುವಂತೆ ಮಾಡುವುದು ಐಐಎಸ್ ಅಧಿಕಾರಿಗಳ ಕರ್ತವ್ಯವಾಗಿದೆ, ಅದು ನೀತಿ ನಿರೂಪಣೆಗೂ ಸಹಾಯ ಮಾಡುತ್ತದೆ ಎಂದರು.
ಜಾಗತಿಕ ಮಾಧ್ಯಮಗಳ ಪ್ರೇರಿತ ನಿರೂಪಣೆಯನ್ನು ಎದುರಿಸಲು ಅಧಿಕಾರಿಗಳಿಗೆ ಕರೆ ನೀಡಿದ ಅವರು, ದೇಶದ ಭದ್ರತೆ ಮತ್ತು ರಕ್ಷಣಾ ಕಾರ್ಯವಿಧಾನದ ಮೇಲೆ ಹೆಚ್ಚಿನ ಪರಿಣಾಮ ಬೀರುವ ತಪ್ಪು ಮಾಹಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಕಳೆದ ಒಂದು ದಶಕದಲ್ಲಿ ಭಾರತವು ಸಾಗಿದ ಪ್ರಯಾಣದ ಅಗಾಧತೆಯನ್ನು ನಿಜವಾಗಿಯೂ ಪ್ರತಿಬಿಂಬಿಸುವ ರೀತಿಯಲ್ಲಿ ಜಗತ್ತನ್ನು ತಲುಪುವ ಅಗತ್ಯವನ್ನು ಅವರು ಒತ್ತಿ ಹೇಳಿದರು.
‘ಬ್ರಾಂಡ್ ಇಂಡಿಯಾ’ ನಿರ್ಮಾಣದಲ್ಲಿ ಭಾರತೀಯ ಮಾಹಿತಿ ಸೇವೆಯ ಪ್ರಮುಖ ಪಾತ್ರವನ್ನು ಒತ್ತಿ ಹೇಳಿದ ಅವರು, ಅತ್ಯಾಧುನಿಕ ತಂತ್ರಜ್ಞಾನಗಳ ಜೊತೆಯಲ್ಲಿಯೇ ಇರುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.