ನವದೆಹಲಿ: 2047ರ ವೇಳೆಗೆ ಭಾರತವನ್ನು ಅಭಿವೃದ್ಧಿಪಡಿಸುವಲ್ಲಿ ಜ್ಞಾನವು ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ರಾಜ್ಗೀರ್ನ ನಳಂದ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ಉದ್ಘಾಟಿಸಿದ ನಂತರ ಸುಷ್ಮಾ ಸ್ವರಾಜ್ ಸಭಾಂಗಣದಲ್ಲಿ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಸಭೆಯನ್ನುದ್ದೇಶಿಸಿ ಮಾತನಾಡಿದ ಮೋದಿ ಅವರು, ಶಿಕ್ಷಣವನ್ನು ಬಲಪಡಿಸುವ ಮೂಲಕ ಭಾರತವು ಜ್ಞಾನ ವ್ಯವಸ್ಥೆಯ ಸೂಪರ್ ಪವರ್ ಸ್ಥಾನವನ್ನು ಸಾಧಿಸಬಹುದು. ನಳಂದ ವಿಶ್ವವಿದ್ಯಾನಿಲಯವು ನಮ್ಮ ಅಸ್ಮಿತೆ ಮತ್ತು ಸಂಪ್ರದಾಯಗಳನ್ನು ಜಗತ್ತಿಗೆ ಉತ್ತಮ ಉದಾಹರಣೆಯಾಗಿದೆ ಎಂದು ಹೇಳಿದರು.
ನಳಂದ ವಿಶ್ವವಿದ್ಯಾನಿಲಯವನ್ನು ತನ್ನ ಹೊಸ ರೂಪದಲ್ಲಿ ಪುನರುಜ್ಜೀವನಗೊಳಿಸಿರುವುದು ಉದಯೋನ್ಮುಖ ಭಾರತದ ಸಾಮರ್ಥ್ಯ ಮತ್ತು ಶಕ್ತಿಯನ್ನು ಸಂಕೇತಿಸುತ್ತದೆ. ನಮ್ಮ ಪುರಾತನ ಸಂಪ್ರದಾಯಗಳ ನೀತಿಯ ಮೇಲೆ ಸರ್ಕಾರವು ಕೆಲಸ ಮಾಡುತ್ತಿದೆ ಆದ್ದರಿಂದ ನಾವು ಅಭಿವೃದ್ಧಿ ಮತ್ತು ಪರಿಸರ ಸಂರಕ್ಷಣೆಯನ್ನು ಒಟ್ಟಾಗಿ ಉತ್ತೇಜಿಸುತ್ತಿದ್ದೇವೆ. ಅಂತರಾಷ್ಟ್ರೀಯ ಸೌರ ಒಕ್ಕೂಟವು ನಾವು ಉತ್ತೇಜಿಸುತ್ತಿರುವ ಅಂತಹ ಹೆಜ್ಜೆಯಾಗಿದೆ ಎಂದು ಪ್ರಧಾನಿ ಹೇಳಿದರು.
ಶಿಕ್ಷಣ ಕ್ಷೇತ್ರದಲ್ಲಿ ಹೊಸ ಗುರುತನ್ನು ನೀಡುವ ಮೂಲಕ ಭಾರತವನ್ನು ದೊಡ್ಡ ಜ್ಞಾನ ಕೇಂದ್ರವಾಗಿ ಮರುಸ್ಥಾಪಿಸಲು ತಮ್ಮ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಮೋದಿ ಪುನರುಚ್ಚರಿಸಿದರು.
ಪುರಾತನ ವಿಶ್ವವಿದ್ಯಾನಿಲಯದ ಇತಿಹಾಸವನ್ನು ಶ್ಲಾಘಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್, “ನಳಂದ ವಿಶ್ವವಿದ್ಯಾಲಯಕ್ಕೆ ಭವ್ಯ ಇತಿಹಾಸವಿದೆ. ಪ್ರಾಚೀನ ಕಾಲದಲ್ಲಿ ನಳಂದ ವಿಶ್ವವಿದ್ಯಾಲಯವನ್ನು ಶಿಕ್ಷಣದ ಕೇಂದ್ರವೆಂದು ಗುರುತಿಸಲಾಗಿತ್ತು ಎಂದರು.
ವಿಶ್ವ ಪರಂಪರೆಯೆಂದು ಗುರುತಿಸಲ್ಪಟ್ಟಿರುವ ಪ್ರಾಚೀನ ನಳಂದಾ ವಿಶ್ವವಿದ್ಯಾಲಯದ ಅವಶೇಷಗಳಿಗೂ ಪ್ರಧಾನಿ ಭೇಟಿ ನೀಡಿದರು. ವಿದೇಶಾಂಗ ಸಚಿವ ಎಸ್. ಜೈಶಂಕರ್, ಬಿಹಾರ ರಾಜ್ಯಪಾಲ ರಾಜೇಂದ್ರ ಅರ್ಲೇಕರ್, ಮುಖ್ಯಮಂತ್ರಿ ನಿತೀಶ್ ಕುಮಾರ್, ಉಪ ಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಸಿನ್ಹಾ ಮತ್ತು ಇತರ ಪ್ರತಿನಿಧಿಗಳು ನಳಂದ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ನಲ್ಲಿ ಉಪಸ್ಥಿತರಿದ್ದರು. 17 ದೇಶಗಳ ರಾಯಭಾರಿಗಳೂ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.