ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಇಂದು ಬೆಳಗ್ಗೆ ಜಮ್ಮುವಿನ ಅಮರನಾಥ ಯಾತ್ರಾ ಮೂಲ ಶಿಬಿರದಿಂದ ಅಮರನಾಥ ಯಾತ್ರಾರ್ಥಿಗಳ ಮೊದಲ ಬ್ಯಾಚ್ಗೆ ಚಾಲನೆ ನೀಡಿದರು.
ಅಮರನಾಥ ಯಾತ್ರಾರ್ಥಿಗಳ ಮೊದಲ ಬ್ಯಾಚ್ಗೆ ಚಾಲನೆ ನೀಡುವ ಮೊದಲು, ಎಲ್ಜಿ ಮನೋಜ್ ಸಿನ್ಹಾ ಅವರು ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಮೊದಲ ಬ್ಯಾಚ್ ಅನ್ನು ಫ್ಲ್ಯಾಗ್ ಆಫ್ ಮಾಡಿದ ನಂತರ, ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ಎಲ್ಜಿ ಮನೋಜ್ ಸಿನ್ಹಾ, “ಅಮರನಾಥ ಯಾತ್ರಾರ್ಥಿಗಳ ಮೊದಲ ಬ್ಯಾಚ್ ಜಮ್ಮುವಿನಿಂದ ಹೊರಟಿದೆ. ಕಳೆದ 3-4 ವರ್ಷಗಳಲ್ಲಿ, ಯಾತ್ರೆಗೆ ಸಾಕಷ್ಟು ವ್ಯವಸ್ಥೆಗಳನ್ನು ಮಾಡಲಾಗಿದೆ ಮತ್ತು ಈ ಬಾರಿಯೂ ಜಮ್ಮು-ಕಾಶ್ಮೀರ ಆಡಳಿತವು ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡಿದೆ, ಭದ್ರತೆಯನ್ನು ಹೆಚ್ಚಿಸಲಾಗಿದೆ” ಎಂದಿದ್ದಾರೆ.
ಅಮರನಾಥ ಯಾತ್ರೆಗೂ ಮುನ್ನ ಸಾವಿರಾರು ಯಾತ್ರಾರ್ಥಿಗಳು ಜಮ್ಮುವಿಗೆ ಆಗಮಿಸಿದ್ದಾರೆ. ಮೊದಲ ಬ್ಯಾಚ್ ಬೆಂಗಾವಲು ಪಡೆಯ ನೆರವಿನೊಂದಿಗೆ ಹೆಚ್ಚಿನ ಭದ್ರತೆಯಲ್ಲಿ ಪ್ರಯಾಣಿಸುತ್ತದೆ ಮತ್ತು ಪಹಲ್ಗಾಮ್ ಮತ್ತು ಬಲ್ಟಾಲ್ ಬೇಸ್ ಕ್ಯಾಂಪ್ ತಲುಪುತ್ತದೆ, ಅಲ್ಲಿ ಅವರು ತಮ್ಮ ಅಮರನಾಥ ಯಾತ್ರೆಯನ್ನು ಪ್ರಾರಂಭಿಸುತ್ತಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.