ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸರಕಾರವನ್ನು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಮಹಿಳೆಯರಿಗೆ ಅವರ ಆಡಳಿತದಡಿ ಸುರಕ್ಷತೆಯೇ ಇಲ್ಲ ಎಂದು ಆರೋಪಿಸಿದ್ದಾರೆ.
ಸಾರ್ವಜನಿಕವಾಗಿ ದಂಪತಿಗಳ ಮೇಲೆ ವ್ಯಕ್ತಿಯೊಬ್ಬ ಅಮಾನುಷವಾಗಿ ಹಲ್ಲೆ ನಡೆಸಿರುವ ಭಯಾನಕ ವಿಡಿಯೋ ವೈರಲ್ ಆಗಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಪಶ್ಚಿಮಬಂಗಾಳದಲ್ಲಿ ಪ್ರಜಾಪ್ರಭುತ್ವ ಇಲ್ಲ ಬದಲಾಗಿ ರಾಜಪ್ರಭುತ್ವ ಇದೆ ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಎಕ್ಸ್ ಪೋಸ್ಟ್ ಮಾಡಿರುವ ನಡ್ಡಾ, “ಪಶ್ಚಿಮ ಬಂಗಾಳದಿಂದ ಭಯಾನಕ ವೀಡಿಯೊವೊಂದು ಬೆಳಕಿಗೆ ಬಂದಿದೆ, ಇದು ರಾಜಪ್ರಭುತ್ವಗಳಲ್ಲಿ ಇರುವ ಕ್ರೌರ್ಯಗಳನ್ನು ನೆನಪಿಸುತ್ತದೆ. ಇನ್ನಷ್ಟು ದುರಾದೃಷ್ಟವೆಂದರೆ, ಟಿಎಂಸಿ ಕಾರ್ಯಕರ್ತರು ಮತ್ತು ಶಾಸಕರು ಈ ಕೃತ್ಯವನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ” ಎಂದಿದ್ದಾರೆ.
“ಸಂದೇಶಖಾಲಿ, ಉತ್ತರ ದಿನಾಜ್ಪುರ ಅಥವಾ ಇತರ ಹಲವು ಸ್ಥಳಗಳಲ್ಲಿ ನಡೆಯುತ್ತಿರುವ ಹಿಂಸೆಗಳು ದೀದಿಯ ಪಶ್ಚಿಮ ಬಂಗಾಳವು ಮಹಿಳೆಯರಿಗೆ ಅಸುರಕ್ಷಿತವಾಗಿದೆ ಎಂಬುದನ್ನು ಸಾರಿ ಹೇಳುತ್ತದೆ” ಎಂದಿದ್ದಾರೆ.
ಬಿದಿರಿನ ಕೋಲಿನಿಂದ ದಂಪತಿಯನ್ನು ವ್ಯಕ್ತಿಯೊಬ್ಬ ಥಳಿಸುತ್ತಿರುವ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಉತ್ತರ ದಿನಾಜ್ಪುರ ಜಿಲ್ಲೆಯ ಚೋಪ್ರಾದ ಸ್ಥಳೀಯ ಟಿಎಂಸಿ ನಾಯಕ ಈ ಕೃತ್ಯ ನಡೆಸಿದ್ದಾನೆ ಎನ್ನಲಾಗಿದೆ. ಕಾಂಗರೂ ನ್ಯಾಯಾಲಯದ ತೀರ್ಪಿನ ನಂತರ ಈ ಘಟನೆ ಸಂಭವಿಸಿದೆ.
ಘಟನೆ ಕುರಿತು ಪಶ್ಚಿಮ ಬಂಗಾಳ ಪೊಲೀಸರು ಭಾನುವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.
https://x.com/DrSukantaBJP/status/1807469451077378536?ref_src=twsrc%5Etfw%7Ctwcamp%5Etweetembed%7Ctwterm%5E1807469451077378536%7Ctwgr%5Ec03ebe6b7274d6eef9f62de1bb3b4031e7508aab%7Ctwcon%5Es1_&ref_url=https%3A%2F%2Fzeenews.india.com%2Findia%2Fwoman-thrashed-on-street-west-bengal-to-have-sharia-law-bjp-questions-tmc-over-muslim-rashtra-remark-2762170.html
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.