ಗುವಾಹಟಿ: ಅಸ್ಸಾಂ ಮತ್ತು ಅರುಣಾಚಲ ಪ್ರದೇಶದಲ್ಲಿ ತೀವ್ರ ಪ್ರವಾಹ ಅಪ್ಪಳಿಸಿದ್ದು, ಭಾರತೀಯ ಯೋಧರು ಇಲ್ಲಿ ಜನರ ಜೀವ ಕಾಪಾಡಲು ಮಹತ್ವದ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದಾರೆ. ಅಸ್ಸಾಂ ಒಂದರಲ್ಲೇ 19 ಜಿಲ್ಲೆಗಳಲ್ಲಿ 6.5 ಲಕ್ಷಕ್ಕೂ ಹೆಚ್ಚು ಜನರು ತೀವ್ರ ಪ್ರವಾಹದಿಂದ ತತ್ತರಿಸುತ್ತಿದ್ದಾರೆ.
ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಉಬ್ಬಿರುವ ಬ್ರಹ್ಮಪುತ್ರ ನದಿಯಲ್ಲಿ 13 ಮಂದಿ ಮೀನುಗಾರರು ನಾಲ್ಕು ದಿನಗಳ ಕಾಲ ದಿಬ್ರುಗಢ್ ಜಿಲ್ಲೆಯ ನದಿ ತೀರದ ದ್ವೀಪದಲ್ಲಿ ಸಿಲುಕಿಕೊಂಡಿದ್ದರು. ಈ ಭೀಕರ ಪರಿಸ್ಥಿತಿಗೆ ತ್ವರಿತವಾಗಿ ಸ್ಪಂದಿಸಿದ ಭಾರತೀಯ ವಾಯುಪಡೆಯು , ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (ASDMA) ಕೋರಿಕೆಯ ಮೇರೆಗೆ ಸವಾಲಿನ ಪರಿಸ್ಥಿತಿಯಲ್ಲೂ ಏರ್ಲಿಫ್ಟ್ ಕಾರ್ಯಾಚರಣೆಯನ್ನು ಹೆಲಿಕಾಪ್ಟರ್ಗಳ ಮೂಲಕ ಮೀನುಗಾರರನ್ನು ರಕ್ಷಿಸಿತು.
ಮೀನುಗಾರರನ್ನು ರಕ್ಷಿಸಿದ ತಕ್ಷಣ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ಅವರ ಮನೆಗಳಿಗೆ ಕಳುಹಿಸಿಕೊಟ್ಟಿದೆ.
ಇನ್ನೊಂದೆಡೆ ಧೆಮಾಜಿ ಜಿಲ್ಲೆಯ ಜೊನೈನಲ್ಲಿ ಪ್ರವಾಹದಲ್ಲಿ ಸಿಲುಕಿದ್ದ ಎಂಟು ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಸಿಬ್ಬಂದಿಗಳು ಮತ್ತು ಕಂದಾಯ ಅಧಿಕಾರಿಯನ್ನು ರಕ್ಷಿಸಲು ವಾಯುಪಡೆ ಹೆಲಿಕಾಪ್ಟರ್ ಕಾರ್ಯಾಚರಣೆಯನ್ನು ನಡೆಸಿತು. ಬ್ರಹ್ಮಪುತ್ರದಲ್ಲಿನ ಪ್ರಕ್ಷುಬ್ಧ ಪರಿಸ್ಥಿತಿಗಳ ಹಿನ್ನೆಲೆಯಲ್ಲಿ ಸಾಂಪ್ರದಾಯಿಕ ದೋಣಿಯ ರಕ್ಷಣೆಗಳು ತುಂಬಾ ಅಪಾಯಕಾರಿಯಾದ ಹಿನ್ನೆಲೆಯಲ್ಲಿ ವಾಯುಸೇನೆ ಮಧ್ಯಪ್ರವೇಶ ಮಾಡಿ ಜೀವಗಳನ್ನು ಕಾಪಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.