ನವದೆಹಲಿ: ದೆಹಲಿಯನ್ನು ಹಸಿರುಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆಯನ್ನು ಮುಂದಿಟ್ಟಿದೆ. ಕಳೆದ ನಾಲ್ಕು ವರ್ಷಗಳಲ್ಲಿ ದೆಹಲಿ ನಗರದಲ್ಲಿ ಎರಡು ಕೋಟಿ ಸಸಿಗಳನ್ನು ಯಶಸ್ವಿಯಾಗಿ ನೆಡಲಾಗಿದೆ ಎಂದು ದೆಹಲಿಯ ಪರಿಸರ ಸಚಿವ ಗೋಪಾಲ್ ರಾಯ್ ಅವರು ಹೇಳಿದ್ದಾರೆ. ಐದು ವರ್ಷಗಳಲ್ಲಿ 2 ಕೋಟಿ ಗಿಡ ನೆಡುವ ಗುರಿಯನ್ನು ನಿಗದಿಪಡಿಸಲಾಗಿತ್ತು, ಇದೀಗ ಆ ಗುರಿಯನ್ನು ನಾಲ್ಕು ವರ್ಷಗಳಲ್ಲಿ ತಲುಪಲಾಗಿದೆ ಎಂದು ಅವರು ಹೇಳಿದ್ದಾರೆ.
ಮುಂದಿನ ವರ್ಷದಲ್ಲಿ 64 ಲಕ್ಷ ವಿವಿಧ ಜಾತಿಯ ಸಸಿಗಳನ್ನು ನೆಡುವ ಮೂಲಕ ಗಿಡ ನೆಡುವ ಅಭಿಯಾನವನ್ನು ವಿಸ್ತರಿಸಲಾಗುವುದು ಎಂದು ರಾಯ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿ ಸರ್ಕಾರ ಮತ್ತು ಅದರ ಏಜೆನ್ಸಿಗಳು ಜುಲೈ 11 ರಂದು ನರೇಲಾದಿಂದ ಈ ಉಪಕ್ರಮವನ್ನು ಮಳೆಗಾಲದ ಆರಂಭದೊಂದಿಗೆ ಪ್ರಾರಂಭಿಸಲಿವೆ ಎಂದು ಹೇಳಿದರು.
ನಿವಾಸಿಗಳ ಸಹಕಾರದ ನಿರ್ಣಾಯಕ ಪಾತ್ರವನ್ನು ಒತ್ತಿ ಹೇಳಿದ ರಾಯ್, ಅಭಿಯಾನದ ಭಾಗವಾಗಿ ನಾಗರಿಕರಿಗೆ ಏಳು ಲಕ್ಷ ಸಸಿಗಳನ್ನು ಉಚಿತವಾಗಿ ವಿತರಿಸಲಾಗುವುದು. 30 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡು, ಮೊದಲ ಹಂತ ಆಗಸ್ಟ್ 9 ರವರೆಗೆ ನಡೆಯಲಿದ್ದು, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಮತ್ತು ಸಸಿ ವಿತರಣೆಯ ಕಾರ್ಯ ನಡೆಯಲಿದೆ. ನೆಟ್ಟ ಗಿಡಗಳ ಲೆಕ್ಕ ಪರಿಶೋಧನೆಯು ನಡೆಯಲಿದೆ. ಹಿಂದಿನ ಲೆಕ್ಕ ಪರಿಶೋಧನೆ ಗಿಡಗಳ 60 ಪ್ರತಿಶತ ಬದುಕುಳಿಯುವಿಕೆಯ ಪ್ರಮಾಣವನ್ನು ತೋರಿಸಿದೆ..
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.