ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಅವರು ಮಂಗಳವಾರ ಕಝಕಿಸ್ತಾನದ ಅಸ್ತಾನಾವನ್ನು ತಲುಪಿದ್ದು, ಗುರುವಾರ ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆ (ಎಸ್ಸಿಒ) ಶೃಂಗಸಭೆಯಲ್ಲಿ ಭಾಗಿಯಾಗಿ ಭಾರತೀಯ ನಿಯೋಗವನ್ನು ಮುನ್ನಡೆಸಲಿದ್ದಾರೆ.
ಜೈಶಂಕರ್ ಆಗಮನದ ಸಂದರ್ಭದಲ್ಲಿ ಕಜಕಿಸ್ತಾನದ ಉಪ ವಿದೇಶಾಂಗ ಸಚಿವ ಅಲಿಬೆಕ್ ಬಕಾಯೇವ್ ಅವರನ್ನು ಸ್ವಾಗತಿಸಿದರು.
ಈಗಾಗಲೇ ಕಝಕಿಸ್ಥಾನದ ಉಪ ಪ್ರಧಾನ ಮಂತ್ರಿ ಮತ್ತು ವಿದೇಶಾಂಗ ಸಚಿವ ಮುರಾತ್ ನರ್ಟ್ಲು ಅವರನ್ನು ಜೈಶಂಕರ್ ಭೇಟಿಯಾದರು. ಶೃಂಗಸಭೆಯ ಆತಿಥ್ಯ ಮತ್ತು ವ್ಯವಸ್ಥೆಗಳಿಗಾಗಿ ಧನ್ಯವಾದ ಅರ್ಪಿಸಿದರು. ವಿಸ್ತರಿಸುತ್ತಿರುವ ಕಾರ್ಯತಂತ್ರದ ಪಾಲುದಾರಿಕೆ ಮತ್ತು ವಿವಿಧ ಸ್ವರೂಪಗಳಲ್ಲಿ ಮಧ್ಯ ಏಷ್ಯಾದೊಂದಿಗೆ ಭಾರತದ ಹೆಚ್ಚುತ್ತಿರುವ ತೊಡಗಿಸಿಕೊಳ್ಳುವಿಕೆಯ ಕುರಿತು ಚರ್ಚಿಸಿದರು. ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಇಬ್ಬರೂ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.
SCO ಶೃಂಗಸಭೆಯಲ್ಲಿ ಭಾಗಿಯಾಗುವ ನಾಯಕರು ಕಳೆದ ಎರಡು ದಶಕಗಳಲ್ಲಿ ಸಂಸ್ಥೆಯ ಚಟುವಟಿಕೆಗಳನ್ನು ಪರಿಶೀಲಿಸುವ ನಿರೀಕ್ಷೆಯಿದೆ ಮತ್ತು ಬಹುಪಕ್ಷೀಯ ಸಹಕಾರದ ಭವಿಷ್ಯವನ್ನು ಚರ್ಚಿಸಲಿದ್ದಾರೆ. ಪ್ರಾದೇಶಿಕ ಮತ್ತು ಅಂತರಾಷ್ಟ್ರೀಯ ಪ್ರಾಮುಖ್ಯತೆಯ ವಿಷಯಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗುವ ನಿರೀಕ್ಷೆಯಿದೆ.
EAM @DrSJaishankar reached Astana to represent PM @narendramodi at the SCO Summit from July 3-4, 2024.
On arrival, EAM was welcomed by Kazakhstan’s Deputy Foreign Minister @AlibekBakayev.@MEAIndia @IndianDiplomacy @nagentv @MFA_KZ pic.twitter.com/a4x0Xd2B2f
— IndiaInKazakhstan (@indembastana) July 2, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.