ಪಾಟ್ನಾ: ಚುನಾವಣೆಯ ಸಂದರ್ಭದಲ್ಲಿ ಅಭ್ಯರ್ಥಿಗಳು ಹಣ, ಹೆಂಡ ಇತ್ಯಾದಿಗಳನ್ನು ಹಂಚಿ ಮತದಾರರನ್ನು ಓಲೈಸಿಕೊಳ್ಳುವುದು ಭಾರತದಲ್ಲಿ ಸರ್ವೇ ಸಾಮಾನ್ಯ ಎಂಬಂತಾಗಿದೆ. ಮತದಾರರು ಕೂಡ ಆಮಿಷಕ್ಕೊಳಗಾಗಿ ಅನರ್ಹರಿಗೆ ಮತ ನೀಡುತ್ತಾರೆ. ಇದರಿಂದಾಗಿಯೇ ಭಾರತದ ರಾಜಕೀಯ ವ್ಯವಸ್ಥೆ ಹದಗೆಡುತ್ತಾ ಸಾಗುತ್ತಿದೆ.
ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿರುವ ಬಿಹಾರದ ಶೇ.80ರಷ್ಟು ಮತದಾರರು ಅಭ್ಯರ್ಥಿಗಳಿಂದ ಹಣ, ಗಿಫ್ಟ್ ಪಡೆದು ಅವರಿಗೆ ಮತ ಹಾಕುವುದರಲ್ಲಿ ಯಾವುದೇ ತಪ್ಪಿಲ್ಲ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ ಎಂದು ಮುಖ್ಯ ಚುನಾವಣಾ ಕಛೇರಿ ನಡೆಸಿದ ಸಮೀಕ್ಷೆಯಿಂದ ತಿಳಿದು ಬಂದಿದೆ.
ಇದನ್ನೇ ಸವಾಲಾಗಿ ತೆಗೆದುಕೊಂಡಿರುವ ಚುನಾಚಣಾ ಕಛೇರಿ, ಪ್ರಚಾರದ ಮೂಲಕ ಮತದಾರರಲ್ಲಿ ನೈತಿಕ ಮತದಾನದ ಬಗ್ಗೆ ಅರಿವು ಮೂಡಿಸಲು ಮುಂದಾಗಿದೆ. ಇದಕ್ಕಾಗಿ ಹಲವಾರು ಬ್ಯಾನರ್, ಪೋಸ್ಟರ್ಗಳನ್ನು ಅಲ್ಲಲ್ಲಿ ಹಾಕುತ್ತಿದೆ. ರೇಡಿಯೋ, ಮುದ್ರಣ ಮಾಧ್ಯಮದಲ್ಲೂ ಜಾಹೀರಾತು ನೀಡಿ, ಅಭ್ಯರ್ಥಿಗಳ ಆಮಿಷಕ್ಕೆ ಒಳಗಾಗಿ ಮತ ಹಾಕಬೇಡಿ ಎಂದು ಕರೆ ನೀಡುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.