ನವದೆಹಲಿ: ಪ್ರಸ್ತುತ ಎರಡು ದಿನಗಳ ಅಧಿಕೃತ ರಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಲಿನ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಜೊತೆಗೆ ಆತ್ಮೀಯ ಕ್ಷಣಗಳನ್ನು ಹಂಚಿಕೊಂಡರು. ಅಲ್ಲದೇ ಎರಡು ವರ್ಷಗಳಿಂದ ನಡೆಯುತ್ತಿರುವ ಉಕ್ರೇನ್ ಯುದ್ಧವನ್ನು ಕೊನೆಗೊಳಿಸುವಂತೆ ನೇರ ಮನವಿ ಮಾಡಿದರು.
ಮಾಸ್ಕೋದಲ್ಲಿ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಅಧಿಕೃತ ನಿವಾಸದಲ್ಲಿ ನಡೆದ ಅನೌಪಚಾರಿಕ ಸಭೆಯ ಸಂದರ್ಭದಲ್ಲಿ, ಪ್ರಧಾನಿ ಮೋದಿ ಅವರು ಯುದ್ಧಭೂಮಿಯಲ್ಲಿ ಯಾವುದೇ ಪರಿಹಾರವನ್ನು ಕಂಡುಹಿಡಿಯಲಾಗುವುದಿಲ್ಲ ಎಂದು ಪುಟಿನ್ಗೆ ಹೇಳಿದರು.
“ಪ್ರಾದೇಶಿಕ ಸಮಗ್ರತೆ ಮತ್ತು ಸಾರ್ವಭೌಮತ್ವ ಸೇರಿದಂತೆ ಯುಎನ್ ಚಾರ್ಟರ್ ಅನ್ನು ಗೌರವಿಸಲು ಭಾರತ ನಿರಂತರ ಕರೆ ನೀಡಿದೆ. ಯುದ್ಧಭೂಮಿಯಲ್ಲಿ ಯಾವುದೇ ಪರಿಹಾರವಿಲ್ಲ. ಮಾತುಕತೆ ಮತ್ತು ರಾಜತಾಂತ್ರಿಕತೆಯು ಮುಂದಿನ ಮಾರ್ಗವಾಗಿದೆ” ಎಂದು ಔತಣಕೂಟದಲ್ಲಿ ಪುಟಿನ್ ಅವರಿಗೆ ಪ್ರಧಾನಿ ಮೋದಿ ಹೇಳಿದರು.
ಅಲ್ಲದೇ ನಕಲಿ ಟ್ರಾವೆಲ್ ಏಜೆಂಟ್ಗಳಿಂದ ವಂಚನೆಗೊಳಗಾಗಿ ರಷ್ಯಾಗೆ ಸ್ಥಳಾಂತರಗೊಂಡು ಅಲ್ಲಿನ ಸೈನ್ಯಕ್ಕೆ ಸೇರಿ ಯುದ್ಧದಲ್ಲಿ ಭಾಗಿಯಾಗುತ್ತಿರುವ ಭಾರತೀಯರ ಬಗ್ಗೆ ಪ್ರಧಾನಿ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ. ಇಂತಹ ವ್ಯಕ್ತಿಗಳನ್ನು ಸ್ವದೇಶಕ್ಕೆ ಹಿಂದಿರುಗಿಸಲು ರಷ್ಯಾ ಬದ್ಧವಾಗಿದೆ ಎಂದು ಮೂಲಗಳು ವರದಿ ಮಾಡಿದೆ.
ಉಕ್ರೇನ್ನಲ್ಲಿ ರಷ್ಯಾ ಯುದ್ಧ ಪ್ರಾರಂಭವಾದ ನಂತರ ಮತ್ತು ಕಳೆದ ತಿಂಗಳು ದಾಖಲೆಯ ಮೂರನೇ ಅವಧಿಗೆ ಅಧಿಕಾರಕ್ಕೆ ಮರಳಿದ ನಂತರ ಪ್ರಧಾನಿ ಮೋದಿಯವರ ಮೊದಲ ರಷ್ಯಾ ಭೇಟಿ ಇದಾಗಿದೆ.
ಪ್ರಧಾನಿ ಮೋದಿಯ ಮೂರನೇ ಅವಧಿಗೆ ಅಭಿನಂದನೆ ಸಲ್ಲಿಸಿದ ವ್ಲಾಡಿಮಿರ್ ಪುಟಿನ್, ಅವರ ಮರುಚುನಾವಣೆಯು ಭಾರತದ ಹಿತಾಸಕ್ತಿಗಳನ್ನು ಮುನ್ನಡೆಸುವಲ್ಲಿ ಮೋದಿಯವರ ಪರಿಣಾಮಕಾರಿತ್ವವನ್ನು ಒತ್ತಿಹೇಳುತ್ತದೆ ಎಂದರು: “ಫಲಿತಾಂಶಗಳು ಸ್ವತಃ ಮಾತನಾಡುತ್ತವೆ; ಭಾರತವು ಈಗ ಆರ್ಥಿಕತೆಯ ವಿಷಯದಲ್ಲಿ ಜಾಗತಿಕವಾಗಿ ಮೂರನೇ ಸ್ಥಾನದಲ್ಲಿದೆ” ಎಂದು ಪುಟಿನ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.