ಚೆನ್ನೈ: ತಮಿಳುನಾಡಿನಲ್ಲಿ ದಲಿತರ ಮೇಲೆ ದೊಡ್ಡ ಪ್ರಮಾಣದ ದೌರ್ಜನ್ಯಗಳು ನಡೆಯುತ್ತಿವೆ ಎಂದು ಮಂಗಳವಾರ ಆರೋಪಿಸಿರುವ ಕೇಂದ್ರ ಸಚಿವ ಎಲ್ ಮುರುಗನ್, ಡಿಎಂಕೆ ಸರ್ಕಾರದಲ್ಲಿ ರಾಜಕೀಯ ನಾಯಕರು ಕೂಡ ಸುರಕ್ಷಿತವಾಗಿಲ್ಲ ಎಂದು ಹೇಳಿದ್ದಾರೆ.
ಚೆನ್ನೈ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಕ್ಷದ ರಾಜ್ಯ ಉಪಾಧ್ಯಕ್ಷ ವಿ.ಪಿ.ದುರೈಸಾಮಿ ನೇತೃತ್ವದ ತಮಿಳುನಾಡು ಬಿಜೆಪಿ ಘಟಕದ ನಿಯೋಗವು ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವನ್ನು ಸಂಪರ್ಕಿಸಲಿದ್ದು, ಈ ವಿಷಯದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತದೆ ಎಂದು ಮುರುಗನ್ ತಿಳಿಸಿದರು.ದುರೈಸಾಮಿ ಸೇರಿದಂತೆ ಬಿಜೆಪಿ ತಮಿಳುನಾಡು ಘಟಕದ ಹಿರಿಯ ನಾಯಕರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
”2021ರ ಮೇನಲ್ಲಿ ಡಿಎಂಕೆ ಅಧಿಕಾರಕ್ಕೆ ಬಂದ ನಂತರ ತಮಿಳುನಾಡಿನಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ಅಪಾರ ಪ್ರಮಾಣದಲ್ಲಿ ಹೆಚ್ಚಿವೆ. ರಾಜ್ಯದಲ್ಲಿ ಪ್ರತಿ ವರ್ಷ 2,000ಕ್ಕೂ ಹೆಚ್ಚು ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ದಾಖಲಾಗುತ್ತಿವೆ ಎಂದು ಸಮೀಕ್ಷೆಯೊಂದು ಹೇಳುತ್ತಿದೆ” ಎಂದು ಮುರುಗನ್ ಹೇಳಿದರು.
ಅವರು 2022 ರಿಂದ ದಲಿತರ ಮೇಲಿನ ನಡೆದ ದೌರ್ಜನ್ಯದ ಸರಣಿ ಘಟನೆಗಳು ಮತ್ತು ರಾಜ್ಯದಲ್ಲಿ ಬಿಜೆಪಿ ನಾಯಕರ ಮೇಲೆ ಹಲ್ಲೆ ಮತ್ತು ಹತ್ಯೆಯ ಕೆಲವು ಘಟನೆಗಳನ್ನು ಉಲ್ಲೇಖಿಸಿದರು ಮತು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರ ಸಂಪೂರ್ಣ ವೈಫಲ್ಯತೆ ಇದಕ್ಕೆ ಕಾರಣ ಎಂದು ಆರೋಪಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.