ಬೆಂಗಳೂರು: ಸಿಆರ್ಪಿಸಿ 125ರ ಪ್ರಕಾರ ಮುಸ್ಲಿಂ ಮಹಿಳೆಯರಿಗೆ ಜೀವನಾಂಶ ಪಡೆಯುವ ಹಕ್ಕನ್ನು ಭಾರತದ ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿರುವುದನ್ನು ಕರ್ನಾಟಕ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ತುಂಬು ಹೃದಯದಿಂದ ಸ್ವಾಗತಿಸುತ್ತದೆ ಎಂದು ರಾಜ್ಯ ಅಧ್ಯಕ್ಷೆ ಕು.ಮಂಜುಳಾ ಅವರು ತಿಳಿಸಿದ್ದಾರೆ.
1985ರಲ್ಲೂ ಸುಪ್ರೀಂಕೋರ್ಟ್ ಇದೇ ಸಿಆರ್ಪಿಸಿ 125ರ ಪ್ರಕಾರ ಮುಸ್ಲಿಂ ಮಹಿಳೆಯರಿಗೆ ವಿಚ್ಛೇದನ ನೀಡುವ ಪತಿ ಜೀವನಾಂಶ ಕೊಡಬೇಕೆಂದು ತೀರ್ಪು ನೀಡಿತ್ತು. ಅದನ್ನು ರಾಜೀವ್ ಗಾಂಧಿಯವರ ನೇತೃತ್ವದ ಕಾಂಗ್ರೆಸ್ ಸರಕಾರ ಸಂಸತ್ತಿನಲ್ಲಿ ತಡೆ ಒಡ್ಡಿ, ಮುಸ್ಲಿಂ ವೈಯಕ್ತಿಕ ಕಾನೂನಿಗೆ ಬೆಂಬಲ ಕೊಟ್ಟು, ಸುಪ್ರೀಂಕೋರ್ಟಿನ ತೀರ್ಪನ್ನು ನಿರಾಕರಿಸಿತ್ತು . ಈ ಮೂಲಕ ಅವರು ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿದ್ದರು. ಅಲ್ಲದೆ, ಮಹಿಳಾಪರವಾದ ನಿಲುವಿನ ವಿರುದ್ಧ ಇಡೀ ಕಾಂಗ್ರೆಸ್ ಪಕ್ಷ ನಿಂತಿತ್ತು. ಪುನಃ ಇದೀಗ ಅದೇ ಜೀವನಾಂಶದ ವಿಚಾರ ಬಂದಿದ್ದು, ಭಾರತದ ಸುಪ್ರೀಂಕೋರ್ಟ್ ಮುಸ್ಲಿಂ ಮಹಿಳೆಯರಿಗೆ ಜೀವನಾಂಶ ಕೊಡುವುದನ್ನು ಎತ್ತಿ ಹಿಡಿದಿದೆ ಎಂದು ಸ್ವಾಗತಿಸಿದ್ದಾರೆ.
ಭಾರತದ ಸಂವಿಧಾನದ ಕುರಿತು ಪದೇಪದೇ ಮಾತನಾಡುವ, ಡೋಂಗಿ ಪ್ರಚಾರ ಮಾಡುವ ಕಾಂಗ್ರೆಸ್ ಪಕ್ಷದವರು ಇವತ್ತು ಮಹಿಳಾ ಪರವಾಗಿ ಹೇಗೆ ನಡೆದುಕೊಳ್ಳುತ್ತಾರೆ ಎಂಬುದನ್ನು ನಿರೀಕ್ಷಿಸುವುದಾಗಿ ತಿಳಿಸಿದ್ದಾರೆ. ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ಸಂಸತ್ತಿನಲ್ಲಿ ಹೇಗೆ ನಡೆದುಕೊಳ್ಳಲಿದ್ದಾರೆ? ಅವರ ತಂದೆ ಮಾಡಿದ್ದನ್ನು ಬೆಂಬಲಿಸುವರೇ ಅಥವಾ ಭಾರತದ ಸುಪ್ರೀಂಕೋರ್ಟ್ ನಿಲುವನ್ನು ಗೌರವಿಸುವರೇ ಎಂದು ಪ್ರಶ್ನಿಸಿದ್ದಾರೆ.
1985ರಲ್ಲಿ ಕಾಂಗ್ರೆಸ್ಸಿಗೆ ಬಹುಮತ ಇದ್ದಾಗ ಮುಸ್ಲಿಂ ಮಹಿಳೆಯರ ನ್ಯಾಯವನ್ನು, ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ಘನತೆಯನ್ನು ಗಾಳಿಗೆ ತೂರಿದ ಕಾಂಗ್ರೆಸ್ ಇವತ್ತು ಅಧಿಕಾರದಲ್ಲಿ ಇಲ್ಲ. ಸನ್ಮಾನ್ಯ ನರೇಂದ್ರ ಮೋದಿಯವರ ನೇತೃತ್ವದ ಎನ್ಡಿಎ ಇವತ್ತು ಆಡಳಿತ ನಡೆಸುತ್ತಿದೆ. ತ್ರಿವಳಿ ತಲಾಖ್ ಅನ್ನು ರದ್ದು ಮಾಡಿದ ಮೋದಿ ಅವರ ಸರಕಾರವು ಈ ಮಹಿಳೆಯರ ಪರವಾಗಿ ಕೂಡ ನಿಲ್ಲಲಿದೆ. ಭಾರತದ ಮಹಿಳೆಯರು ಮೋದಿಜೀ ಅವರ ಸರಕಾರದಲ್ಲಿ ಸುರಕ್ಷಿತರಾಗಿದ್ದಾರೆ ಎಂದೂ ಅವರು ವಿಶ್ಲೇಷಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.